ಲೋಕಸಭಾ ಚುನಾವಣೆ : ದ.ಕ. ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ಜಯಭೇರಿ ಆಗುವಂತೆ ಕಾರ್ಯಕರ್ತರು ಕೆಲಸ ನಿರ್ವಹಿಸಬೇಕು :ಮಿಥುನ್ ರೈ – Vishwanews24
ಮಂಗಳೂರು,: ಪಂಪ್ವೆಲ್ ಪ್ಲೈಓವರ್ ಸೇರಿದಂತೆ ಹಲವು ವೈಫಲ್ಯಗಳೇ ಸಂಸದ ನಳಿನ್ ಅವರ ಸಾಧನೆ ಎಂದು ಎಂದು ದ.ಕ. ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಆರೋಪಿಸಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಹಾಗೂ ಕಾರ್ಯಕಾರಿಣಿ ಸಮಿತಿ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಮತ ಕೇಳಿದ ಸಂಸದ ನಳಿನ್ ಕುಮಾರ್ ಕಟೀಲು ಅವರು ದ.ಕ. ಜಿಲ್ಲೆಗೆ ಯಾವುದೇ ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಬದಲಾಗಿ ರಾಷ್ಟ್ರೀಯ ಹೆದ್ದಾರಿಯ ನೂರಾರು ಸಮಸ್ಯೆಗಳು ಅಧಿಕಗೊಂಡು, ಪಂಪ್ವೆಲ್ ಪ್ಲೈಓವರ್ ಸೇರಿದಂತೆ ಹಲವು ವೈಫಲ್ಯಗಳೇ ಕಾಣಸಿಗುತ್ತಿವೆ ಎಂದು ಟೀಕಿಸಿದರು.
ಈ ವೇಳೆ ಮಾತನಾಡಿದ ರಮಾನಾಥ ರೈ, ಪ್ರಸ್ತುತ ಜಿಲ್ಲೆಯಲ್ಲಿ ಬಿಜೆಪಿ ಶಾಸಕರಿಂದ ಯಾವುದೇ ಕೆಲಸ ಆಗುತ್ತಿಲ್ಲ. ಹಿಂದಿನ ಶಾಸಕರು ಮಾಡಿದ ಕೆಲಸಗಳನ್ನು ಮಾಡುತ್ತಿದ್ದಾರೆ ಮಾತ್ರ. ದ.ಕ. ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಆಗುವಂತೆ ಕಾರ್ಯಕರ್ತರು ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.
ಸಂಸದೀಯ ಕಾರ್ಯದರ್ಶಿ ಐವನ್ ಡಿ’ಸೋಜಾ, ಪ್ರಮುಖರಾದ ಕೆ.ಎಸ್.ಮಹಮ್ಮದ್ ಮಸೂದ್, ಅಭಯಚಂದ್ರ ಜೈನ್, ಜೆ.ಆರ್ ಲೋಬೋ, ಮೊದಿನ್ ಬಾವಾ, ಕಣಚೂರು ಮೋನು, ರಾಜಶೇಖರ್ ಕೋಟ್ಯಾನ್, ಶಾಲೆಟ್ಪಿಂಟೋ,ಎಂ.ಎಸ್ ಮಹಮ್ಮದ್, ಭರತ್ ಮುಂಡೋಡಿ, ಕವಿತಾ ಸನಿಲ್, ಪುರುಷೋತ್ತಮ ಚಿತ್ರಾಪುರ, ನವೀನ್ ಡಿ’ಸೋಜಾ, ಪ್ರಸಾದ್ರಾಜ್ ಕಾಂಚನ್, ಪದ್ಮನಾಭ ನರಿಂಗಾನ, ಸಂತೋಷ್ ಕುಮಾರ್ ಶೆಟ್ಟಿ, ನೀರಜ್ಪಾಲ್, ನಝೀರ್ ಬಜಾಲ್ ಉಪಸ್ಥಿತರಿದ್ದರು.
