ಲೋಕಸಭೆ ಚುನಾವಣೆ : ಕಾಂಗ್ರೆಸ್ ಸೇರಿದರೆ ಪ್ರಕಾಶ್ ರೈ ಅವರಿಗೆ ಬೆಂಬಲ : ಕೆಪಿಸಿಸಿ ಅಧ್ಯಕ್ಷ ಗುಂಡೂರಾವ್ – Vishwanews24
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿ ಎಂದು ಕೋರಿದ್ದ ಬಹುಭಾಷ ನಟನಿಗೆ ರಾಜ್ಯ ಕಾಂಗ್ರೆಸ್ ನಿರಾಸೆ ಮೂಡಿಸಿದೆ. ನಮ್ಮದು ರಾಷ್ಟ್ರೀಯ ಪಕ್ಷ. ಹೀಗಾಗಿ ಪರೋಕ್ಷ ಬೆಂಬಲ ನೀಡಲು ಸಾಧ್ಯವಿಲ್ಲ. ಒಂದು ವೇಳೆ ಕಾಂಗ್ರೆಸ್ ಸೇರಿದರೇ ಪ್ರಕಾಶ್ ರೈ ಅವರಿಗೆ ಬೆಂಬಲ ನೀಡಬಹುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾಗರರ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು, ಪ್ರಕಾಶ್ ರೈ ವಿಚಾರವನ್ನು ಈಗಾಗಲೇ ಸಭೆಯಲ್ಲಿ ಚರ್ಚಿಸಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ನನ್ನ ಜತೆಗೆ ಬೆಂಬಲ ನೀಡಿ ಎಂದು ರೈ ಮನವಿ ಮಾಡಿದ್ದಾರೆ. ನಮ್ಮದು ರಾಷ್ಟ್ರೀಯ ಪಕ್ಷ. ಆದ್ದರಿಂದ ಅವರು ಕಾಂಗ್ರೆಸ್ ಸೇರಿದರೆ ಬೆಂಬಲ ನೀಡಬಹುದು ಎಂದು ಭರವಸೆ ನೀಡಿದ್ದಾರೆ. ಇತ್ತ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಪಕ್ಷೇತರವಾಗಿ ಸ್ಪರ್ಧಿಸುತ್ತಿರುವ ರೈ ಅವರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತದೆ ಎಂಬ ಸಣ್ಣ ನಿರೀಕ್ಷೆಯಿತ್ತು. ಆದರೀಗ ಎಲ್ಲವೂ ಹುಸಿಯಾಗಿದೆ. ಆದರಿಂದ ರೈ ತಮ್ಮ ಸ್ವಂತ ಬಲದಿಂದಲೇ ಹೋರಾಡಬೇಕಿದೆ.
ಇನ್ನು ಪ್ರಸ್ತುತ ಬೆಂಗಳೂರು ಸೆಂಟ್ರಲ್ ಕ್ಷೇತ್ರವು ಬಿಜೆಪಿಯ ವಶದಲ್ಲಿದೆ. ಇಲ್ಲಿನ ಹಾಲಿ ಸಂಸದ ಪಿ.ಸಿ.ಮೋಹನ್ ಎರಡು ಬಾರಿ ಗೆದ್ದಿದ್ದು, ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ಧಾರೆ. ಈಗಾಗಲೇ ಚುನಾವಣೆ ಪ್ರಚಾರ ಆರಂಬಿಸಿರುವ ಪ್ರಕಾಶ್ ರೈ ಅವರು, ಯೋಚಿಸಿ ವೋಟ್ ಮಾಡುವಂತೆ ಜನರಲ್ಲಿ ಮನವಿ ಮಾಡುತ್ತಿದ್ದಾರೆ. ಅಲ್ಲದೇ ಕ್ಷೇತ್ರದಲ್ಲಿ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಎನ್ನಲಾಗಿದೆ.

