ಲೋಕಸಭೆ ಚುನಾವಣೆ :ಪ್ರಧಾನಿ ಮೋದಿ ಗೆಲುವು ಸಾಧಿಸಿದರೆ ಭಾರತ ಜತೆಗಿನ ಶಾಂತಿ ಮಾತುಕತೆಗೆ ಉತ್ತಮ ಅವಕಾಶವಿದೆ : ಇಮ್ರಾನ್ ಖಾನ್ – Vishwanews24

Featured, ಅಂತಾರಾಷ್ಟ್ರೀಯ ನ್ಯೂಸ್

ಇಸ್ಲಾಮಾಬಾದ್: 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗೆಲುವು ಸಾಧಿಸಿದರೆ ಭಾರತ ಜತೆಗಿನ ಶಾಂತಿ ಮಾತುಕತೆಗೆ ಉತ್ತಮ ಅವಕಾಶವಿದೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್  ಹೇಳಿದ್ದಾರೆ.

ಪತ್ರಕರ್ತರೊಂದಿಗಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಭಾರತದಲ್ಲಿ ಮುಂದಿನ ಸರ್ಕಾರವು ವಿರೋಧ ಪಕ್ಷವಾದ ಕಾಂಗ್ರೆಸ್ ನೇತೃತ್ವದಲ್ಲಿದ್ದರೆ ಪಾಕಿಸ್ತಾನದೊಂದಿಗಿನ ಕಾಶ್ಮೀರದ ಸಮಸ್ಯೆಯ ಕುರಿತು ಬಗೆಹರಿಸಿಕೊಳ್ಳಲು ಕೊಂಚ ಭಯಪಡುವ ಸಾಧ್ಯತೆ ಇದೆ. ಬಲಪಂಥೀಯ ಪಕ್ಷವಾದ ಬಿಜೆಪಿಯು ಗೆದ್ದರೆ ಕಾಶ್ಮೀರದಲ್ಲಿನ ಸಮಸ್ಯೆಗೆ ಕೆಲವು ಪರಿಹಾರಗಳನ್ನು ಕಾಣಬಹುದು ಎಂದು ತಿಳಿಸಿದ್ದಾರೆ.

ಈಗ ಭಾರತದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ನಾನು ಕಾಣಬಹುದೆಂದು ಎಂದಿಗೂ ಯೋಚಿಸಿಯೇ ಇರಲಿಲ್ಲ. ಇದೀಗ ಮುಸ್ಲಿಂ ಮತ್ತು ಮುಸ್ಲಿಮೇತರ ಮೇಲೆ ದಾಳಿ ಮಾಡಲಾಗುತ್ತಿದೆ. ಹಲವು ವರ್ಷಗಳಿಂದಲೂ ತಮ್ಮ ಅಲ್ಲಿನ ಪರಿಸ್ಥಿತಿ ಬಗ್ಗೆ ಸಂತೋಷವಾಗಿಯೇ ಇದ್ದ ಭಾರತೀಯ ಮುಸ್ಲಿಮರು ಇದೀಗ ತೀವ್ರ ಹಿಂದೂ ರಾಷ್ಟ್ರೀಯತೆಯಿಂದಾಗಿ ಆತಂಕಕ್ಕೊಳಗಾಗಿದ್ದಾರೆ ಎಂದು ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ ಇಮ್ರಾನ್‌ ಖಾನ್‌ ತಿಳಿಸಿದ್ದಾರೆ.