ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಭರ್ಜರಿ ತಯಾರಿ ; ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ಸೋಮವಾರ ಕೇಂದ್ರ ಚುನಾವಣಾ ಸಮಿತಿ ಸಭೆ – Vishwanews24

Featured, ರಾಜ್ಯ ನ್ಯೂಸ್
ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕ ಪ್ರದೇಶ ಚುನಾವಣಾ ಸಮಿತಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರು ಲೋಕ ಸಮರಕ್ಕೆ ಸಿದ್ದರಾಗುತ್ತಿದ್ದಾರೆ.
ಲೋಕ ಸಮರಕ್ಕೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವ ಹಿನ್ನೆಲೆಯಲ್ಲಿ ಸೋಮವಾರ ಸಭೆ ಏರ್ಪಡಿಸಲಾಗಿದೆ, ಸಭೆಯಲ್ಲಿ  ಕಣಕ್ಕಿಳಿಯುವ ಅಭ್ಯರ್ಥಿಗಳು ಹಾಗೂ 28 ಕ್ಷೇತ್ರಗಳಲ್ಲಿ  ಮಾಡಬೇಕಾದ ಚುನಾವಣಾ ತಂತ್ರಗಾರಿಕೆ ಬಗ್ಗೆ ಚರ್ಚಿಸಲಾಗುತ್ತದೆ.
ಸೋಮವಾರ ನಡೆಯುವ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಕೂಡ ಭಾಗವಹಿಸಲಿದ್ದಾರೆ, ಕೇಂದ್ರ ಚುನಾವಣಾ ಸಮಿತಿ ಸಭೆ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸೀಟು ಹಂಚಿಕೆ ಸಂಬಂಧ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಜಿ. ಪರಮೇಶ್ವರ್ ಹೇಳಿದ್ದು ಎಲ್ಲಾ ಸಮುದಾಯಗಳ ನಾಯಕರಿಗೂ ಸ್ಪರ್ದಿಸಲು ಅವಕಾಶ ನೀಡಲಾಗುವುದು ಸಾಮಾಜಿಕ ನ್ಯಾಯ ಒದಗಿಸುವುದು, ಗೆಲ್ಲುವ ಅಭ್ಯರ್ಥಿಗಳಿಗೆ ಆದ್ಯತೆ ನೀಡುವುದು, ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಚುನಾವಣಾ ಸಮಿತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಬಿ,ಕೆ ಹರಿಪ್ರಸಾದ್ ಸೇರಿದಂತೆ ಹಲವು ಮಂದಿಯಿದ್ದಾರೆ.