ವಾಯುಭಾರ ಕುಸಿತ : ಇಂದಿನಿಂದ ಮಾ.28 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯಿಂದ ಮಳೆಯಾಗುವ ಮುನ್ಸೂಚನೆ – Vishwanews24

Featured, ಉಡುಪಿ, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ವಾಯುಭಾರ ಕುಸಿತ : ಇಂದಿನಿಂದ ಮಾ.28 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯಿಂದ ಮಳೆಯಾಗುವ ಮುನ್ಸೂಚನೆ – Vishwanews24

ಬೆಂಗಳೂರು : ಇಂದಿನಿಂದ 3 ದಿನಗಳ ಕಾಲ ರಾಜ್ಯದ ಹಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ.

ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಮಳೆ ಅಬ್ಬರಿಸಲಿದ್ದು, ಇಂದಿನಿಂದ ಮಾರ್ಚ್ 28 ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಹಾಗೂ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೇಸಿಗೆಯಲ್ಲಿ ಜಾಸ್ತಿ ತಾಪಮಾನ ಉಂಟಾಗುವ ಸಾಧ್ಯತೆಯಿದ್ದು, ಏಪ್ರಿಲ್ – ಮೇ ತಿಂಗಳಲ್ಲಿ ಬೆಂಗಳೂರಿನಲ್ಲಿ ಗರಿಷ್ಟ ತಾಪಮಾನ 37 ಡಿಗ್ರಿ ಸೆಲ್ಷಿಯಸ್ ತನಕ ಇರಲಿದೆ ಎಂದು ಹೇಳಲಾಗುತ್ತದೆ.

ರಾಜ್ಯದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ ಮಾರ್ಚ್ 26ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 27, 28 ರಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮಾರ್ಚ್28 ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಮುಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ಜಾತ್ರಾ ಮಹೋತ್ಸವಕ್ಕೆ ಭೇಟಿ ನೀಡಿದ ಬಾಲಿವುಡ್‌ನ ನಟ ಸುನೀಲ್ ಶೆಟ್ಟಿ – Vishwanews24

Leave a Reply