ವಾಯುಭಾರ ಕುಸಿತ : ತಮಿಳುನಾಡಿನಾದ್ಯಂತ ಭಾರೀ ಮಳೆಯ ಮುನ್ಸೂಚನೆ, ಕೆಲ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ – vishwanews24

Featured, ರಾಷ್ಟ್ರ ನ್ಯೂಸ್

ವಾಯುಭಾರ ಕುಸಿತ : ತಮಿಳುನಾಡಿನಾದ್ಯಂತ ಭಾರೀ ಮಳೆಯ ಮುನ್ಸೂಚನೆ, ಕೆಲ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕಳೆದ 2-3 ದಿನಗಳಿಂದ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕೆಲ ಜಿಲ್ಲೆಗಳಿಗೆ ಇಂದು ರೆಡ್‌ ಮತ್ತು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ನಡುವೆ ಕೆಲ ಜಿಲ್ಲೆಗಳಿಗೆ ಪ್ರವಾಹ ಮುನ್ಸೂಚನೆಯನ್ನೂ ನೀಡಲಾಗಿದ್ದು, ರಕ್ಷಣಾ ಸಿಬ್ಬಂದಿ ನಿಗಾ ವಹಿಸಿದ್ದಾರೆ.

ತಂಜಾವೂರು, ತಿರುವರೂರು, ನಾಗಪಟ್ಟಣಂ ಮತ್ತು ಮೈಲಾಡುತುರೈ ಜಿಲ್ಲೆಗಳಲ್ಲಿ ರಸ್ತೆಗಳು ಜಲಾವೃತವಾಗಿದ್ದು ವಾಹನ ಸಂಚಾರಕ್ಕೆ ಅಡ್ಡಿಯುಂಟುಮಾಡಿದೆ.

ಮಳೆಯ ಅಬ್ಬರದಿಂದಾಗಿ  ತೂತುಕುಡಿಯಲ್ಲಿ ಥಾಮಿರಬರಣಿ ನದಿಯಲ್ಲಿ ಉಬ್ಬರವಿಳಿತ ಹೆಚ್ಚಾಗುತ್ತಿದ್ದು, ಶ್ರೀವೈಕುಂಟಂ ಮತ್ತು ಎರಲ್‌ಗೆ ಪ್ರವಾಹ ಮುನ್ಸೂಚನೆ ನೀಡಲಾಗಿದೆ. ಮತ್ತೊಂದೆಡೆ ಚೆನ್ನೈನಲ್ಲಿ ಪೂಂಡಿ ಅಣೆಕಟ್ಟಿನಿಂದ ಇದ್ದಕ್ಕಿದ್ದಂತೆ 12,000 ಕ್ಯುಸೆಕ್‌ ಹೆಚ್ಚುವರಿ ನೀರು ಹರಿಸಲಾಗುತ್ತಿದ್ದು, ಇದರಿಂದ ಜಲಾಶಯಗಳ ಸಮೀಪವಿರುವ ರೆಡ್‌ಹಿಲ್ಸ್ ಮತ್ತು ಚೆಂಬರಂಬಾಕ್ಕಂ ಪ್ರದೇಶಗಳಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ತಿರುನಲ್ವೇಲಿ ಮತ್ತು ತೆಂಕಶಿಯಲ್ಲಿ ಮಳೆ ಹಾನಿ ಮುಂದುವರಿದಿದೆ.

ಉಡುಪಿ: ರಾಜ್ಯ ಸರಕಾರದ ಗ್ಯಾರಂಟಿಗಳನ್ನು ಅರ್ಹರಿಗೆ ತಲುಪಿಸಿ : ಅಧಿಕಾರಿಗಳಿಗೆ ರಮೇಶ್‌ ಕಾಂಚನ್‌ ಸೂಚಿಸಿದ್ದ ಸೂಚನೆ – vishwanews24

ಕಳೆದ 24 ಗಂಟೆಯಲ್ಲಿ ರಾಮನಾಥಪುರಂ ಜಿಲ್ಲೆಯ ತೊಂಡಿ ಮತ್ತು ತಿರುವಡನೈ ಜಿಲ್ಲೆಗಳಲ್ಲಿ ಕ್ರಮವಾಗಿ 5 ಮತ್ತು 4 ಸೆಂ.ಮೀ. ಮಳೆಯಾಗಿದೆ. ಮಧುರೈ, ದಿಂಡಿಗಲ್ ಮತ್ತು ಥೇಣಿ ಭಾಗಗಳಲ್ಲಿ 1 ರಿಂದ 2 ಸೆಂ.ಮೀ. ಮಳೆಯಾಗಿದೆ. ತಂಜಾವೂರಿನ ಮಂಜಲಾರಿನಲ್ಲಿ 6.1 ಸೆಂ.ಮೀ ನಷ್ಟು ಮಳೆಯ ಪ್ರಮಾಣ ದಾಖಲಾಗಿದೆ. ಇನ್ನೂ ಕಂಡಿಯೂರು ಮತ್ತು ಸಾತನೂರು ಸೇರಿದಂತೆ ಇತರ ಪ್ರದೇಶಗಳಲ್ಲಿ ಮನೆ ಗೋಡೆಗಳು ಕುಸಿದಿದ್ದು, ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಾನಿಯಾಗಿದೆ.

ತಿರುವಳ್ಳೂರು, ಚೆನ್ನೈ, ಕಾಂಚೀಪುರಂ, ಚೆಂಗಲ್ಪಟ್ಟು, ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ನಾಗಪಟ್ಟಿಣಂ, ತಿರುವರೂರು, ತಂಜಾವೂರು, ಪುದುಕೊಟ್ಟೈ, ಶಿವಗಂಗಾ, ರಾಮನಾಥಪುರಂ, ಮಧುರೈ, ಥೇಣಿ, ವಿರುಧುನಗರ ಸೇರಿದಂತೆ ಹಲವು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.

ಬೆಳ್ಮಣ್‌: ಕ್ರೈಸ್ತ ಯುವಕನ ಅಯ್ಯಪ್ಪ ಭಕ್ತಿ ; 18ನೇ ಬಾರಿ ಶಬರಿಮಲೆ ಯಾತ್ರೆ – vishwanews24

Leave a Reply