ವಿಟ್ಲ: ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರಕ್ಕೆ ಅನ್ಯ ಕೋಮಿನ ವಿದ್ಯಾರ್ಥಿಗೆ ಹಲ್ಲೆ ; ಪ್ರಕರಣ ದಾಖಲು – Vishwanews24

Featured, ದಕ್ಷಿಣ ಕನ್ನಡ

ವಿಟ್ಲ: ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರಕ್ಕೆ ಅನ್ಯ ಕೋಮಿನ ವಿದ್ಯಾರ್ಥಿಗೆ ಹಲ್ಲೆ – ಪ್ರಕರಣ ದಾಖಲು

ವಿಟ್ಲ: ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರವಾಗಿ ತಂಡಯೊಂದು ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೀರಕಂಬ ಗ್ರಾಮದ ಮಂಗಳಪದವು ನಿವಾಸಿ ಖಲಂದರ್ ಅಬ್ಬಾಸ್ ಅವರ ಪುತ್ರ ಮಹಮ್ಮದ್‌ ಶಾಕೀರ್‌ ಎಂಬಾತ ನೀಡಿದ ದೂರಿನಂತೆ ಕೆಲಿಂಜ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ: ಹಿಂದೂ ಕಾರ್ಯಕರ್ತ ರಾಜೇಶ್‌‌‌ನ ಸಾವು ಪ್ರಕರಣ – ಮುಂದುವರಿದ ತನಿಖೆ – Vishwanews24

ಮಂಗಳೂರು ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಶಾಕೀರ್‌, ಗುರುವಾರ ಕಾಲೇಜು ಮುಗಿಸಿ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮನೆಗೆ ಬರುತ್ತಿದ್ದಾಗ ಪಕ್ಕದ ಸೀಟಿನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ಚಾಕಲೇಟು ಬೇಕೆ ಎಂದು ಕೇಳಿದ್ದನೆನ್ನಲಾಗಿದ್ದು, ಇದನ್ನು ಪ್ರಶ್ನಿಸಿ ವೀರಕಂಭ ಗ್ರಾಮದ ಕೆಲಿಂಜ ಎಂಬಲ್ಲಿಗೆ ಬಸ್ ತಲುಪಿದಾಗ ಬಸ್ಸಿಗೆ ಏಕಾಏಕಿಯಾಗಿ ಆರೋಪಿಗಳು ಹಾಗೂ ಇತರ 3 ಜನರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ನೈತಿಕ ಪೊಲೀಸ್ ಗಿರಿ - ಬಸ್ ನಲ್ಲಿ ವಿಧ್ಯಾರ್ಥಿನಿ ಜೊತೆ ಮಾತನಾಡಿದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ - themangaloremirror.in

ಈ ಬಗ್ಗೆ ಶಾಕೀರ್ ಪೊಲೀಸರಿಗೆ ದೂರು ನೀಡಿದ್ದು, ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

‘ಮಿಸ್ ಯೂನಿವರ್ಸ್’ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ ಮಂಗಳೂರು ಬೆಡಗಿ ದಿವಿತಾ ರೈ – Vishwanews24

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Leave a Reply