ವಿದ್ಯುತ್ ಶಾಕ್​ : ಯುವ ಇಂಜಿನಿಯರ್ ಸಾವು – vishwanews24

Featured, ರಾಜ್ಯ ನ್ಯೂಸ್

ವಿದ್ಯುತ್ ಶಾಕ್​ : ಯುವ ಇಂಜಿನಿಯರ್ ಸಾವು

ಆನೇಕಲ್: ವಿದ್ಯುತ್ ಶಾಕ್‍ನಿಂದ  ಯುವ ಇಂಜಿನಿಯರ್ ಸಾವಿಗೀಡಾದ ಘಟನೆ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಯಸ್ಕಾವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ

ಬೆಂಗಳೂರಿನ ನಿವಾಸಿ ಕೌಶಿಕ್ (27) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಪ್ಯಾನಲ್ ಬೋರ್ಡ್ ತಯಾರು ಮಾಡಬೇಕಾದರೆ ವಿದ್ಯುತ್ ತಗಲಿದೆ. ಕೂಡಲೆ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆಯೇ ಅವರು ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರು: ವಿದೇಶದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ ಸಂಗ್ರಹಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ – vishwanews24

ಕಂಪನಿಯಲ್ಲಿ ಕೆಲಸ ಮಾಡಬೇಕಾದರೆ ಯಾವುದೇ ಸುರಕ್ಷತೆ ಇರಲಿಲ್ಲ. ಹೀಗಾಗಿ ಕಾರ್ತಿಕ್ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೇ ಕಂಪನಿಯಿಂದ ಕೈಗೆ ಗ್ಲೌಸ್ ಸಹ ನೀಡದೆ ನಿರ್ಲಕ್ಷ ತೋರಿದೆ. ಇದರಿಂದ ಮಗನನ್ನು ಕಳೆದುಕೊಂಡಿದ್ದೇವೆ ಎಂದು ತಾಯಿ ಕಣ್ಣೀರಿಟ್ಟಿದ್ದಾರೆ.ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

Leave a Reply