ವಿಧಾನಸಭೆಯಲ್ಲಿ ಮಂಗಳೂರು ಗೋಲಿಬಾರ್ ಪ್ರಸ್ತಾವನೆ : ಪೊಲೀಸ್ ಅಧಿಕಾರಿಗಳೇ ನಿಂತು ಗೋಲಿಬಾರ್ ಮಾಡಿಸಿದ್ದಾರೆ : ಸಿದ್ದರಾಮಯ್ಯ -Vishwanews24

Featured, ದಕ್ಷಿಣ ಕನ್ನಡ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟಿಸುತ್ತಿದ್ದವರ ಮೇಲೆ ಗೋಲಿಬಾರ್ ನಡೆಸಿದ ಕ್ರಮವನ್ನು ವಿಧಾನಸಭೆಯಲ್ಲಿ ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಸ್ತಾಪಿಸಿದರು.

‘ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳೇ ನಿಂತು ಗೋಲಿಬಾರ್ ಮಾಡಿಸಿದ್ದಾರೆ. 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಹೇರಿದ್ದಾರೆ. ಸತ್ತವರಿಗೆ ಪರಿಹಾರ ಕೊಡಲು ಆಗಲ್ಲ ಎಂದರು’ ಎಂದು ಸಿದ್ದರಾಮಯ್ಯ ಟೀಕಿಸಿದರು.

‘ಕಲ್ಲಡ್ಕ ಪ್ರಭಾಕರ್ ಭಟ್ ನಡೆಸುವ ಶಾಲೆಯಲ್ಲಿ ಬಾಬ್ರಿ ಮಸೀದಿ ಕೆಡವುವ ನಾಟಕ ಪ್ರದರ್ಶನ ನಡೆದಿತ್ತು. ಅದರೆ ಯಾರ ಮೇಲೆಯೂ ಪ್ರಕರಣ ದಾಖಲಾಗಲಿಲ್ಲ. ಗೋಲಿಬಾರ್ ಮಾಡಿದರೆ ಮುಸ್ಲಿಮರ ಸಂಖ್ಯೆ ಕಡಿಮೆ ಆಗುತ್ತದೆ ಎಂದು ಮತ್ತೊಬ್ಬರು ಹೇಳಿದರು. ಆಗಲೂ ಪ್ರಕರಣ ದಾಖಲಾಗಲಿಲ್ಲ. ಬೀದರ್ ಶಾಲೆಯಲ್ಲಿ ಮಾತ್ರ ಶಿಕ್ಷಕಿಯನ್ನು ಬಂಧಿಸಿದರು. ಇದು ಅರಾಜಕತೆ ಅಲ್ಲದೆ ಇನ್ನೇನು’ ಎಂದು ಪ್ರಶ್ನಿಸಿದರು.

‘ಈ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು. ತಪ್ಪಿತಸ್ಥ ಪೊಲೀಸರನ್ನು ಜೈಲಿಗೆ ಹಾಕಬೇಕು. ಇದರ ಜವಾಬ್ದಾಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟಿಸುತ್ತಿದ್ದವರ ಮೇಲೆ ಗೋಲಿಬಾರ್ ನಡೆಸಿದ ಕ್ರಮವನ್ನು ವಿಧಾನಸಭೆಯಲ್ಲಿ ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಜೆಡಿಎಸ್ ನಾಯಕ ಎಚ್‌.ಡಿ.ಕುಮಾರಸ್ವಾಮಿ ಪ್ರಸ್ತಾಪಿಸಿದರು.
‘ಮಂಗಳೂರಿನಲ್ಲಿ ಪೊಲೀಸ್ ಅಧಿಕಾರಿಗಳೇ ನಿಂತು ಗೋಲಿಬಾರ್ ಮಾಡಿಸಿದ್ದಾರೆ. 144ನೇ ವಿಧಿಯ ಅನ್ವಯ ನಿಷೇಧಾಜ್ಞೆ ಹೇರಿದ್ದಾರೆ. ಸತ್ತವರಿಗೆ ಪರಿಹಾರ ಕೊಡಲು ಆಗಲ್ಲ ಎಂದರು’ ಎಂದು ಸಿದ್ದರಾಮಯ್ಯ ಟೀಕಿಸಿದರು.

‘ಕಲ್ಲಡ್ಕ ಪ್ರಭಾಕರ್ ಭಟ್ ನಡೆಸುವ ಶಾಲೆಯಲ್ಲಿ ಬಾಬ್ರಿ ಮಸೀದಿ ಕೆಡವುವ ನಾಟಕ ಪ್ರದರ್ಶನ ನಡೆದಿತ್ತು. ಅದರೆ ಯಾರ ಮೇಲೆಯೂ ಪ್ರಕರಣ ದಾಖಲಾಗಲಿಲ್ಲ. ಗೋಲಿಬಾರ್ ಮಾಡಿದರೆ ಮುಸ್ಲಿಮರ ಸಂಖ್ಯೆ ಕಡಿಮೆ ಆಗುತ್ತದೆ ಎಂದು ಮತ್ತೊಬ್ಬರು ಹೇಳಿದರು. ಆಗಲೂ ಪ್ರಕರಣ ದಾಖಲಾಗಲಿಲ್ಲ. ಬೀದರ್ ಶಾಲೆಯಲ್ಲಿ ಮಾತ್ರ ಶಿಕ್ಷಕಿಯನ್ನು ಬಂಧಿಸಿದರು. ಇದು ಅರಾಜಕತೆ ಅಲ್ಲದೆ ಇನ್ನೇನು’ ಎಂದು ಪ್ರಶ್ನಿಸಿದರು.
‘ಈ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು. ತಪ್ಪಿತಸ್ಥ ಪೊಲೀಸರನ್ನು ಜೈಲಿಗೆ ಹಾಕಬೇಕು. ಇದರ ಜವಾಬ್ದಾರಿ ಸರ್ಕಾರ ಹೊರಬೇಕು’ ಎಂದು ಆಗ್ರಹಿಸಿದರು.