ವಿರಾಟ್​ ಕೊಹ್ಲಿ ನನ್ನ ನೆಚ್ಚಿನ ಆಟಗಾರ ; ಭಾರತ ತಂಡ ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸಲಿದೆ : ಸಿದ್ದರಾಮಯ್ಯ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಏಕದಿನ ವಿಶ್ವಕಪ್​ ಟೂರ್ನಿಯ ಲೀಗ್​ ಹಂತದ ಕೊನೆಯ 2 ಪಂದ್ಯಗಳು ಇಂದು ನಡೆಯಲಿದ್ದು, ಭಾರತ ತಂಡ ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಅವರ ಈ ಕ್ರಿಕೆಟ್​ ಪ್ರೀತಿ ವಿಶ್ವಕಪ್​ ಟೂರ್ನಿಯಲ್ಲೂ ಮುಂದುವರಿದಿದ್ದು, ಈ ಬಾರಿ ಭಾರತ ತಂಡ ವಿಶ್ವಕಪ್​ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು ಈ ಬಾರಿ ಸೆಮಿಫೈನಲ್​ನಲ್ಲಿ ಎಲ್ಲಾ ಬಲಿಷ್ಠ ತಂಡಗಳಿದ್ದು, ಭಾರತ ತಂಡ ಅತ್ಯುತಮ ನಿರ್ವಹಣೆ ತೋರಲಿದೆ. ವಿರಾಟ್​ ಕೊಹ್ಲಿ ನನ್ನ ನೆಚ್ಚಿನ ಆಟಗಾರ. ಕೊಹ್ಲಿ ನನಗೆ ಮಾತ್ರ ಅಲ್ಲ ಎಲ್ಲರಿಗೂ ನೆಚ್ಚಿನ ಆಟಗಾರ ಎಂದು ಸಿದ್ದರಾಮಯ್ಯ ತಿಳಿಸಿದರು.

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಅಂಗ್ರಸ್ಥಾನ ಪಡೆಯಲು ಪೈಪೋಟಿ ನಡೆಸುತ್ತಿವೆ. ಇಂದು ಈ ಎರಡು ತಂಡಗಳ ಫಲಿತಾಂಶ ಸೆಮಿಫೈನಲ್​ನಲ್ಲಿ ಈ ತಂಡಗಳು ಎದುರಿಸುವ ತಂಡವನ್ನು ನಿರ್ಧರಿಸಲಿದೆ.