ವಿಷ್ಣುವರ್ಧನ್ ಹೆಸರಿಗೆ ಮಸಿ ಬಳಿಯುವ ಕೆಲಸವನ್ನು ಅನಿರುದ್ದ ಮಾಡಲ್ಲ ಅನ್ನುವುದು ನನ್ನ ನಂಬಿಕೆ : ಎಸ್.ನಾರಾಯಣ್ – Vishwanews24

Featured, ರಾಜ್ಯ ನ್ಯೂಸ್

ವಿಷ್ಣುವರ್ಧನ್ ಹೆಸರಿಗೆ ಮಸಿ ಬಳಿಯುವ ಕೆಲಸವನ್ನು ಅನಿರುದ್ದ ಮಾಡಲ್ಲ ಅನ್ನುವುದು ನನ್ನ ನಂಬಿಕೆ : ಎಸ್.ನಾರಾಯಣ್

ನಟ ಅನಿರುದ್ಧ ಹೊಸ ಧಾರಾವಾಹಿಯನ್ನು ಘೋಷಿಸುತ್ತಿದ್ದಂತೆಯೇ ವಿರೋಧ ವ್ಯಕ್ತವಾಗಿದೆ. ಎಸ್.ನಾರಾಯಣ್ ನಿರ್ದೇಶನದ ಸೂರ್ಯವಂಶ ಧಾರಾವಾಹಿಯಲ್ಲಿ ಅನಿರುದ್ಧ ನಾಯಕನಾಗಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯನ್ನು ತಡೆಯಬೇಕು ಎಂದು ಕನ್ನಡ ಕಿರುತೆರೆ ನಿರ್ಮಾಪಕರು ಆಗ್ರಹಿಸಿದ್ದಾರೆ. ಅನಿರುದ್ಧ ಮೇಲೆ ಎರಡು ವರ್ಷಗಳ ಕಾಲ ಅಲಿಖಿತ ನಿಷೇಧ ಹೇರಿದ್ದರಿಂದ ಅವರಿಗಾಗಿ ಸೀರಿಯಲ್ ಮಾಡದಂತೆ ನಾರಾಯಣ್ ಅವರಿಗೆ ಮನವಿ ಮಾಡಿದ್ದಾರೆ.

Sooryavamsha: ಮತ್ತೆ ಧಾರಾವಾಹಿಗೆ ಮರಳಿದ ಅನಿರುದ್ಧ್​; ಈ ಬಾರಿ ಎಸ್. ನಾರಾಯಣ್​ ಜೊತೆ  'ಸೂರ್ಯವಂಶ' - Anirudh Jatkar new serial with S Narayan titled Sooryavamsha;  New Kannada serial will go on air on Udaya Tv |

 

ಈ ಕುರಿತು ಮಾತನಾಡಿರುವ ಎಸ್.ನಾರಾಯಣ್, ‘ ಅನಿರುದ್ದ ಅವರ ಬಗ್ಗೆ ಬಹಳಷ್ಟು ಆರೋಪಗಳನ್ನ ಮಾಡಿದ್ದಾರೆ.ಆ ಆರೋಪಗಳು ಸುಳ್ಳಾಗಲಿ ಅಂತ ನಾನು ಆಶಿಸುತ್ತೇನೆ. ಅನಿರುದ್ದ ಅವರು ವಿಷ್ಣುವರ್ಧನ್ ಅಳಿಯ. ಅವರ ಹೆಸರಿಗೆ ಮಸಿ ಬಳಿಯುವ ಕೆಲಸವನ್ನು ಮಾಡಲ್ಲ ಅನ್ನುವುದು ನನ್ನ ನಂಬಿಕೆ. ಮಾತು ಕತೆಯ ಮೂಲಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಅವಕಾಶ ಇದೆ. ಕಿರುತರೆಯ ನಿರ್ಮಾಪಕರು ನನ್ನ ಬಳಿ ಮಾತನಾಡಿ ಅವರು ಎದುರಿಸಿದ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಇಂದು ಸಂಜೆ ಸಭೆಯಲ್ಲಿ ಆ ಕುರಿತು ಮಾತನಾಡುತ್ತೇನೆ’ ಎಂದಿದ್ದಾರೆ.

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಸ್ಯಾಂಡಲ್‌ವುಡ್ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯ  – Vishwanews24

ಕನ್ನಡ ಕಿರುತೆರೆ ನಿರ್ಮಾಪಕರ ಸಂಘವು ಅನಿರುದ್ಧ ಅವರಿಗೆ ಎರಡು ವರ್ಷಗಳ ಕಾಲ ನಿಷೇಧ ಹೇರುವ ಕುರಿತು ತೀರ್ಮಾನ ತಗೆದುಕೊಂಡಿತ್ತು. ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಕಿರಿಕ್ ಮಾಡಿದರು ಎನ್ನುವ ಕಾರಣಕ್ಕಾಗಿ ಎರಡು ವರ್ಷಗಳ ಕಾಲ ಅನಿರುದ್ಧ ಅವರಿಗೆ ಯಾರೂ ಕೆಲಸ ಕೊಡಬಾರದು ಎಂದು ಹೇಳಲಾಗಿತ್ತು. ಆದರೆ, ಘಟನೆ ನಡೆದ ಕೆಲವೇ ತಿಂಗಳಲ್ಲೇ ಅನಿರುದ್ಧ ಮತ್ತೊಂದು ಧಾರಾವಾಹಿಗೆ ಹೀರೋ ಆಗಿ ಆಯ್ಕೆಯಾಗಿದ್ದಾರೆ.

ಮಂಗಳೂರು : ಬಸ್ ಟೈಮಿಂಗ್ಸ್ ವಿಚಾರಕ್ಕೆ ಗಲಾಟೆ – ಖಾಸಗಿ ಬಸ್ ಸಿಬ್ಬಂದಿಗಳು ಪೊಲೀಸ್‌ ವಶಕ್ಕೆ :- Vishwanews24

Leave a Reply