ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ -Vishwanews24
ಬೆಂಗಳೂರು: 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಆ ಕ್ಷೇತ್ರದ ಮತದಾರರು ನೀಡಿರುವ ತೀರ್ಪನ್ನು ನಾನು ಗೌರವಿಸಿ ಒಪ್ಪಿಕೊಂಡಿದ್ದೇನೆ ಎಂದು ಹೇಳಿದ ಸಿದ್ದರಾಮಯ್ಯನವರು ತಮ್ಮ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಉಳಿವಿನ ದೃಷ್ಟಿಯಿಂದ ಪಕ್ಷಾಂತರಿಗಳಿಗೆ, ಕುದುರೆ ವ್ಯಾಪಾರಕ್ಕೆ ಒಳಗಾಗಿದ್ದವರಿಗೆ ಜನರು ಶಿಕ್ಷೆ ಕೊಡುತ್ತಾರೆ, ಅವರಿಗೆ ಪಾಠ ಕಲಿಸುತ್ತಾರೆ ಎಂದು ನಿರೀಕ್ಷೆ ಮಾಡಿದ್ದೆ. ಆದರೆ ನನ್ನ ನಿರೀಕ್ಷೆ ಹುಸಿಯಾಗಿದೆ ಎಂದು ನೋವಿನಿಂದ ಹೇಳಿದರು.
ನಾನು ಶಾಸಕಾಂಗ ಪಕ್ಷದ ನಾಯಕನಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು. ಹಾಗಾಗಿ ಪಕ್ಷದ ಹಿತದೃಷ್ಟಿಯಿಂದ ನನ್ನ ಶಾಸಕಾಂಗ ಪಕ್ಷದ ನಾಯಕತ್ವಕ್ಕೆ ರಾಜೀನಾಮನೆ ನೀಡಿದ್ದೇನೆ.
ರಾಜೀನಾಮೆಯ ಒಂದು ಪ್ರತಿಯನ್ನು ಎಐಸಿಸಿಗೆ, ಕೆಪಿಸಿಸಿಗೆ ಹಾಗೂ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿವೇಣುಗೋಪಾಲ್ ಅವರಿಗೆ ಈಗಾಗಲೇ ಸಲ್ಲಿಸಿದ್ದೇನೆ ಎಂದು ಹೇಳಿದರು.
