ಶಿರೂರು ಗುಡ್ಡಕುಸಿತ ಪ್ರಕರಣ – ಹೆಚ್ಚಿನ ಪರಿಹಾರಕ್ಕೆ ಪ್ರಧಾನಿ ಮೋದಿ ಅನುಮೋದನೆ – vishwanews24

Featured, ರಾಜ್ಯ ನ್ಯೂಸ್

ಶಿರೂರು ಗುಡ್ಡಕುಸಿತ ಪ್ರಕರಣ – ಹೆಚ್ಚಿನ ಪರಿಹಾರಕ್ಕೆ ಪ್ರಧಾನಿ ಮೋದಿ ಅನುಮೋದನೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಶಿರೂರು ಭೂ ಕುಸಿತ ಪ್ರಕರಣದ ವಿಚಾರವಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಬರೆದ ಪತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ಪಂದಿಸಿದ್ದಾರೆ.

ಸಂಸದ ಕಾಗೇರಿಯವರು ವಿಶೇಷ ಪ್ರಕರಣದಡಿ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಕೋರಿದ್ದರು. ಈ ಪತ್ರಕ್ಕೆ ಮೋದಿ ಸ್ಪಂದಿಸಿ, ವಿಶೇಷ ಪ್ರಕರಣ ಎಂದು ಪರಿಗಣಿಸಿ ಸಂತ್ರಸ್ತರಿಗೆ ವಿಶೇಷ ಅನುದಾನ ಬಿಡುಗಡೆಗೆ ಮೋದಿ ಅನುಮತಿ ನೀಡಿದ್ದಾರೆ ಜೊತೆಗೆ, ಕೇಂದ್ರ ಸರ್ಕಾರದಿಂದ ಶಿರೂರು ದುರಂತದಲ್ಲಿ ಸಾವನ್ನಪ್ಪಿದವರಿಗೆ ಎನ್‌ಡಿಆರ್‌ಎಫ್ ರಿಲೀಫ್ ಫಂಡ್​​ನಿಂದ 5 ಲಕ್ಷ ಬಿಡುಗಡೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯ ಮೇಲೆ ಗುಡ್ಡ ಕುಸಿತದಲ್ಲಿ ಒಟ್ಟು 11 ಜನರು ಸಾವನ್ನಪ್ಪಿದ್ದಾರೆ. ಆದರೆ, ಕೇರಳ ಮೂಲದ ಅರ್ಜುನ್​ ಇದುವರೆಗೂ ಪತ್ತೆಯಾಗಿಲ್ಲ. ಸತತ ಪ್ರಯತ್ನದ ಮೂಲಕ ಹುಡುಕಾಟ ನಡೆಸಲಾಗಿತ್ತಾದರೂ ಅರ್ಜುನನ ಸುಳಿವು ಮಾತ್ರ ಸಿಕ್ಕಿಲ್ಲ

Leave a Reply