ಶಿವಮೊಗ್ಗ ನಗರದಾಧ್ಯಂತ ಫೆ.26ರವರೆಗೆ 144 ಸೆಕ್ಷನ್ ವಿಸ್ತರಣೆ – ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ – Vishwanews24

Featured, ರಾಜ್ಯ ನ್ಯೂಸ್

ಶಿವಮೊಗ್ಗ ನಗರದಾಧ್ಯಂತ ಫೆ.26ರವರೆಗೆ 144 ಸೆಕ್ಷನ್ ವಿಸ್ತರಣೆ – ಜಿಲ್ಲಾಧಿಕಾರಿ ಸೆಲ್ವಮಣಿ ಆದೇಶ – Vishwanews24

ಶಿವಮೊಗ್ಗ: ಹರ್ಷ ಹತ್ಯೆ ಪ್ರಕರಣದ ಬಳಿಕ ಶಿವಮೊಗ್ಗ ನಗರದಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆಯನ್ನು ಫೆಬ್ರವರಿ 26ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದ್ದಾರೆ.

ಈ ಕುರಿತು ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ, ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಶಿವಮೊಗ್ಗ ನಗರ ವ್ಯಾಪ್ತಿಯೊಳಗೆ ಸಿಆರ್ ಪಿಸಿ ಕಲಂ 144 ರನ್ವಯ ಪ್ರತಿಬಂಧಕಾಜ್ಞೆಯನ್ನು ಫೆಬ್ರವರಿ 26 ಬೆಳಿಗ್ಗೆ 9 ಗಂಟೆಯವರೆಗೆ ಜಾರಿಗೊಳಿಸಲಾಗಿದೆ ಎಂದಿದ್ದಾರೆ.

ಇನ್ನು ನಿಷೇಧಾಜ್ಞೆಯ ಸಂದರ್ಭದಲ್ಲಿ ಐದಕ್ಕಿಂತ ಹೆಚ್ಚು ಜನರ ಗುಂಪು ಸೇರುವಂತಿಲ್ಲ. ಯಾವುದೇ ಮೆರವಣಿಗೆ ಸಭೆ, ಸಮಾರಂಭಗಳು, ವಿಜಯೋತ್ಸವ, ಸಾರ್ವಜನಿಕ ಪ್ರತಿಭಟನಾ ಮೆರವಣಿಗೆ, ಜಾಥಾ, ಧರಣಿ, ಮುಷ್ಕರ, ರಸ್ತೆ ರೋಕೋ ನಡೆಸುವಂತಿಲ್ಲ ಎಂದು ತಿಳಿಸಿದ್ದಾರೆ.

ಬ್ರಹ್ಮಾವರ ಸಕ್ಕರೆ ಕಾರ್ಖಾನೆಗೆ ಅನುದಾನ ನೀಡುವಂತೆ, ಮುಖ್ಯಮ0ತ್ರಿಗೆ ಕಿಸಾನ್ ಕಾಂಗ್ರೆಸ್ ಮನವಿ – Vishwanews24

Leave a Reply