ಶಿವಮೊಗ್ಗ:  ಸಮೀರ್ ತಂಗಿಯನ್ನು ಚುಡಾಯಿಸಿದ್ದಕ್ಕೆ ಭಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ : ಎಸ್​ಪಿ ಜಿ.ಕೆ.ಮಿಥುನ್ ಕುಮಾರ್ – Vishwanews24

Featured, ರಾಜ್ಯ ನ್ಯೂಸ್

ಶಿವಮೊಗ್ಗ:  ಸಮೀರ್ ತಂಗಿಯನ್ನು ಚುಡಾಯಿಸಿದ್ದಕ್ಕೆ ಭಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ : ಎಸ್​ಪಿ ಜಿ.ಕೆ.ಮಿಥುನ್ ಕುಮಾರ್

 ಶಿವಮೊಗ್ಗ: ಸಾಗರದಲ್ಲಿ ಭಜರಂಗದಳದ ಕಾರ್ಯಕರ್ತನ ಹತ್ಯೆ ಯತ್ನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದೀಗ ಶಿವಮೊಗ್ಗದ ಎಸ್​ಪಿ ಜಿ.ಕೆ.ಮಿಥುನ್ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಮಿಥುನ್ ಕುಮಾರ್, ವೈಯಕ್ತಿಕ ವಿಚಾರವಾಗಿ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ ಸಮೀರ್ ಹಲ್ಲೆ ಮಾಡಿದ್ದಾನೆ. ತಂಗಿಯನ್ನು ಸುನೀಲ್ ಚುಡಾಯಿಸಿದ್ದ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿತ್ತು. 4-5 ತಿಂಗಳಿನಿಂದ ಸಮೀರ್ ತಂಗಿಯನ್ನು ಚುಡಾಯಿಸಿದ್ದ ಆರೋಪ ಮಾಡಿದ್ದಾನೆ ಎಂದಿದ್ದಾರೆ.

ರೈತ ಸಮುದಾಯಕ್ಕೆ ಸಿಹಿಸುದ್ದಿ : ಇನ್ಮುಂದೆ ಕೊಳವೆಬಾವಿ ಕೊರೆಸಲು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ – Vishwanews24

ಸಮೀರ್ ತಂಗಿಯ ಫೋನ್ ನಂಬರ್ ಕೇಳಿದ್ದ. ಇದೇ ವಿಚಾರವಾಗಿ ಸುನೀಲ್ ಹಾಗೂ ಸಮೀರ್ ನಡುವೆ ಗಲಾಟೆ ಆಗಿತ್ತು. ನಿನ್ನೆ ಮೇಕೆಗಳಿಗೆ ಹುಲ್ಲು ತರಲು ಹೋಗಿದ್ದ ವೇಳೆ ಸಮೀರ್, ಸುನೀಲ್ ನನ್ನು ನೋಡಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿಸಿದ್ದಾರೆ.

ದಾಳಿಯ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬೇರೆ ಯಾರಾದರೂ ಪ್ರಕರಣದಲ್ಲಿ ಇದ್ದಾರೆಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸುನಿಲ್, ಸಮೀರ್ ಸಹೋದರಿಗೆ ಚುಡಾಯಿಸಿರುವ ಕಾಲ್ ರೆಕಾರ್ಡ್ಸ್ ಲಭ್ಯವಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಎಸ್​​ಪಿ ಜಿ.ಕೆ.ಮಿಥುನ್ ಹೇಳಿದ್ದಾರೆ.

ಆಸ್ಕರ್ ಪ್ರಶಸ್ತಿಗಾಗಿ ಅರ್ಹತೆ ಸುತ್ತಿನಲ್ಲಿ ಸ್ಥಾನ ಪಡೆದ ಕಾಂತಾರ – Vishwanews24

ಸಾಗರ ನಗರದ ಬಿ.ಎಚ್​.ರಸ್ತೆಯ ಬಸ್ ನಿಲ್ದಾಣ ಬಳಿ ಬಜರಂಗದಳ ಕಾರ್ಯಕರ್ತ ಸುನೀಲ್ ಮೇಲೆ ಸಮೀರ್ ಮಚ್ಚು ಬೀಸಿದ್ದು, ಅದೃಷ್ಟವಶಾತ್​ ಕೂದಲೆಳೆ ಅಂತರದಲ್ಲಿ ದಾಳಿಯಿಂದ ಸುನೀಲ್ ಪಾರಾಗಿದ್ದ. ದಾಳಿಗೆ ಯತ್ನಿಸಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.

Leave a Reply