ಶೃಂಗೇರಿ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಆರೋಪಿಗಳಿಬ್ಬರಿಗೆ ಗಲ್ಲು ಶಿಕ್ಷೆ ಪ್ರಕಟ -Vishwanews24

Featured, ದಕ್ಷಿಣ ಕನ್ನಡ, ರಾಜ್ಯ ನ್ಯೂಸ್

ಚಿಕ್ಕಮಗಳೂರು: ಶೃಂಗೇರಿ ವಿದ್ಯಾರ್ಥಿನಿ ಸ್ವಾತಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಬ್ಬರಿಗೆ ಗಲ್ಲು ಶಿಕ್ಷೆ ವಿಧಿಸಿ ಸ್ಥಳೀಯ ನ್ಯಾಯಾಲಯ ಆದೇಶ ಹೊರಡಿಸಿದೆ.

ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಉಮೇಶ್‌ ಎಂ ಅಡಿಗ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದರು.

ಸಂತೋಷ್‌, ಪ್ರದೀಪ್‌ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ಪ್ರಕಟಿಸಲಾಗಿದೆ.

2016ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೆಣಸೆಯಲ್ಲಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಿ, ಕೊಂದು ಪಾಳು ಬಾವಿಗೆ ಎಸೆಯಲಾಗಿತ್ತು. ಈ ಘಟನೆ ಚಿಕ್ಕಮಗಳೂರು ಮಾತ್ರವಲ್ಲದೆ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಕಾಲೇಜಿನಲ್ಲಿ ಪರೀಕ್ಷೆ ಮುಗಿಸಿಕೊಂಡು ಮೆಣಸೆಯಿಂದ ಕಾಲುದಾರಿಯಲ್ಲಿ ಮನೆಗೆ ಹೋಗುತ್ತಿದ್ದ ಬಿಕಾಂ ವಿದ್ಯಾರ್ಥಿನಿಯನ್ನು ಎಳೆದೊಯ್ದಿದ್ದ ಅದೇ ಊರಿನ ಯುವಕರು ಆಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿ, 50 ಅಡಿಯ ಬಾವಿಯಲ್ಲಿ ಎಸೆದು ಹೋಗಿದ್ದರು.

ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಂತೋಷ್, ಪ್ರದೀಪ್ ಮೇಲಿನ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೂ ಗಲ್ಲು ಶಿಕ್ಷೆ ವಿಧಿಸಿ ಚಿಕ್ಕಮಗಳೂರು ಪ್ರಧಾನ ನ್ಯಾಯಾಲಯ ಆದೇಶ ಹೊರಡಿಸಿದೆ. 4 ವರ್ಷಗಳಿಂದ ಈ ಪ್ರಕರಣದ ವಿಚಾರಣೆ ನಡೆದಿತ್ತು. ಇಂದು ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ತೀರ್ಪು ಪ್ರಕಟಗೊಳಿಸಿದ್ದಾರೆ. ಮೃತ ಯುವತಿಯ ಪರ ಹಿರಿಯ ವಕೀಲ ವಿ.ಜಿ. ಯಲಕೇರಿ ವಾದ ಮಂಡಿಸಿ, ಮರಣದಂಡನೆ ವಿಧಿಸುವಂತೆ ಕೋರ್ಟ್​ಗೆ ಮನವಿ ಮಾಡಿದ್ದರು. ಈ ಕುರಿತು ವಿಚಾರಣೆ ನಡೆಸಿ, ತೀರ್ಪು ಪ್ರಕಟಿಸಿರುವ ಜಿಲ್ಲಾ ನ್ಯಾಯಾಲಯ ಗಲ್ಲು ಶಿಕ್ಷೆ ಘೋಷಿಸಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292