ಸಂಪಾಜೆ : KSRTC ಹಾಗೂ ಕಾರು ನಡುವೆ ಭೀಕರ ಅಪಘಾತ : ಮಗು ಸಹಿತ ಆರು ಮಂದಿ ದುರ್ಮರಣ – Vishwanews24

Featured, ದಕ್ಷಿಣ ಕನ್ನಡ

ಸಂಪಾಜೆ: ಕೆಎಸ್ಆರ್ಟಿಸಿ-ಕಾರು ನಡುವೆ ಭೀಕರ ಅಪಘಾತ – ಮಗು ಸಹಿತ ಆರು ಮಂದಿ ದುರ್ಮರಣ

ಸುಳ್ಯ,: ಮಾಣಿ – ಮೈಸೂರು ರಾ.ಹೆದ್ದಾರಿಯ ಸಂಪಾಜೆ ಬಳಿ ಕೆ.ಎಸ್.ಆರ್ ಟಿ. ಸಿ ಹಾಗೂ ಕಾರೊಂದರ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ ಭೀಕರ ಘಟನೆ ನಡೆದಿದೆ.

ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವುದಾಗಿ ತಿಳಿದುಬಂದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರ ಪೈಕಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಹೇಳಲಾಗಿದ್ದು, ಗಾಯಗೊಂಡವರನ್ನು ಸುಳ್ಯದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆ.

ಮೂವರು ಮಕ್ಕಳು, ಇಬ್ಬರು ಮಹಿಳೆಯರು, ಓರ್ವ ಗಂಡಸು ಮೃತಪಟ್ಟಿದ್ದಾರೆ. ಮೃತದೇಹ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಹಾಗೂ ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ.

ಕಾಪು : ಏ. 17 ರಂದು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ನಾಮಪತ್ರ ಸಲ್ಲಿಕೆ – Vishwanews24

Leave a Reply