ಸಣ್ಣ ಉಳಿತಾಯಗಳ ಮೇಲಿನ ಬಡ್ಡಿ ದರ ಕಡಿತ ಆದೇಶವನ್ನು ಹಿಂಪಡೆದ ಕೇಂದ್ರ ಸರಕಾರ -Vishwanews24
ಸಣ್ಣ ಉಳಿತಾಯಗಳ ಮೇಲಿನ ಬಡ್ಡಿ ದರ ಕಡಿತ ಆದೇಶವನ್ನು ಹಿಂಪಡೆದ ಕೇಂದ್ರ ಸರಕಾರ -Vishwanews24
ಹೊಸದಿಲ್ಲಿ: ಬುಧವಾರ ಸಂಜೆ ಘೋಷಿಸಿದ್ದ ಸಣ್ಣ ಉಳಿತಾಯಗಳ ಯೋಜನೆಗಳ ಮೇಲಿನ ಬಡ್ಡಿದರಗಳ ಮೇಲಿನ ಭಾರೀ ಕಡಿತಯನ್ನು ಕೇಂದ್ರ ಸರಕಾರ ಇಂದು ಹಿಂದಕ್ಕೆ ಪಡೆದಿದೆ.
ಭಾರತ ಸರಕಾರದ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳು 2020-21ರ ಕೊನೆಯ ತ್ರೈಮಾಸಿಕದಲ್ಲಿ ಅಸ್ತಿತ್ವದಲ್ಲಿದ್ದ ಅಂದರೆ 2021ರ ಹೊತ್ತಿಗೆ ಇದ್ದ ದರಗಳಲ್ಲಿ ಮುಂದುವರಿಯುತ್ತದೆ. ಕಣ್ತಪ್ಪಿನಿಂದ ಹೊರಡಿಸಲಾಗಿರುವ ಆದೇಶಗಳನ್ನು ಹಿಂಪಡೆಯಲಾಗುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಬೆಳಗ್ಗೆ ಟ್ವೀಟ್ ಮಾಡಿದ್ದಾರೆ.
Interest rates of small savings schemes of GoI shall continue to be at the rates which existed in the last quarter of 2020-2021, ie, rates that prevailed as of March 2021.
Orders issued by oversight shall be withdrawn. @FinMinIndia @PIB_India— Nirmala Sitharaman (@nsitharaman) April 1, 2021
402 ಸಿವಿಲ್ ಪಿ.ಎಸ್.ಐ ನೇಮಕಕ್ಕೆ ಅಧಿಸೂಚನೆ ಪ್ರಕಟ-Vishwanews24
ಸಣ್ಣ ಉಳಿತಾಯ ಯೋಜನೆಗಳ ಮೇಲೆ ಬಡ್ಡಿದರ ಕಡಿತ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ನಿನ್ನೆ ಪ್ರಕಟಿಸಿತ್ತು. ಬ್ಯಾಂಕ್ ಗಳಲ್ಲಿ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರ ಕಡಿತದಂತೆಯೇ 2021-22ನೇ ಆರ್ಥಿಕ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಎನ್ ಎಸ್ ಸಿ ಮತ್ತು ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯಗಳ ಮೇಲೆ ಬಡ್ಡಿದರವನ್ನು ಶೇಕಡಾ 1.1ರಷ್ಟು ಕಡಿತ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು.
51 ನೇ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆಗೊಂಡ ಸೂಪರ್ ಸ್ಟಾರ್ ರಜನಿಕಾಂತ್ -Vishwanews24
