ಸತತ ನಾಲ್ಕನೇ ಬಾರಿಗೆ ಪಡುಬಿದ್ರಿ ಸಿ.ಎ.ಬ್ಯಾಂಕ್ ಗೆ ಅಧ್ಯಕ್ಷರಾಗಿ ಆಯ್ಕೆಯಾದ ವೈ ಸುಧಿರ್ ಕುಮಾರ್, ಮೂರನೇ ಬಾರಿಗೆ ಉಪಾಧ್ಯಕ್ಷರಾಗಿ ಗುರುರಾಜ್ ಪೂಜಾರಿ ಪುನರಾಯ್ಕೆ.
ಸತತ ನಾಲ್ಕನೇ ಬಾರಿಗೆ ಪಡುಬಿದ್ರಿ ಸಿ.ಎ.ಬ್ಯಾಂಕ್ ಗೆ ಅಧ್ಯಕ್ಷರಾಗಿ ಆಯ್ಕೆಯಾದ ವೈ
ಸುಧಿರ್ ಕುಮಾರ್.
ಕಾಪು: ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಮುಂದಿನ ಐದು ವರ್ಷಗಳ ಅವಧಿಗೆ ವೈ ಸುಧಿರ್ ಕುಮಾರ್ ಪುನರಾಯ್ಕೆಗೊಂಡಿದ್ದಾರೆ ಮತ್ತು ಗುರುರಾಜ್ ಪೂಜಾರಿ ಸತತ ಮೂರನೇ ಬಾರಿಗೆ ಉಪಾಧ್ಯಕ್ಷರಾಗಿ ಅವಿರೋಧವಾಗಿ ಪುನಾರಯ್ಕೆಗೊಂಡಿದ್ದಾರೆ.
ಪದಾಧಿಕಾರಿಗಳ ಆಯ್ಕೆಗಾಗಿ ಮಂಗಳವಾರ ಸೊಸೈಟಿಯ ಪ್ರದಾನ ಕಚೇರಿಯಲ್ಲಿ ನಡೆದ ಪ್ರಕ್ರಿಯೆಯಲ್ಲಿ ಕಾರ್ಕಳ ಸಹಕಾರಿ ಸಂಘಗಳ ಅಭಿವೃದ್ಧಿ ಅಧಿಕಾರಿ ಅರುಣ್ ಕುಮಾರ್ .ಎಸ್.ವಿ ಅವರು ರಿಟರ್ನಿಂಗ್ ಅಧಿಕಾರಿಯಾಗಿ ಚುನಾವಣೆ ಪ್ರಕ್ರಿಯೆ ನಡೆಸಿದರು.
