ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನ – Vishwanews24
ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನ
ನವದೆಹಲಿ: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಸೋಮವಾರ ಬೆಳಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
82 ವರ್ಷದ ಮುಲಾಯಂ ಸಿಂಗ್ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 8 ರಿಂದ 8:30ರ ನಡುವೆ ಇಹಲೋಕ ತ್ಯಜಿಸಿದರು.
ಶಿರ್ವ: ಪಿಕಪ್ ವಾಹನ ಡಿಕ್ಕಿ; ಪಾದಾಚಾರಿ ಸಾವು – Vishwanews24
ಸಮಾಜವಾದಿ ಪಕ್ಷದ ಸ್ಥಾಪಕರಾಗಿದ್ದ ಅವರು ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ ಹಿರಿಯ ನಾಯಕರು.

