ಸಾರಿಗೆ ಹಾಗೂ ಶಾಲಾ ಬಸ್ ನಡುವೆ ಭೀಕರ ಅಪಘಾತ : ಇಬ್ಬರು ಮಕ್ಕಳು ಮೃತ್ಯು, ಹಲವರಿಗೆ ಗಂಭೀರ ಗಾಯ – vishwanews24

Featured, ರಾಜ್ಯ ನ್ಯೂಸ್

ಸಾರಿಗೆ ಹಾಗೂ ಶಾಲಾ ಬಸ್ ನಡುವೆ ಭೀಕರ ಅಪಘಾತ : ಇಬ್ಬರು ಮಕ್ಕಳು ಮೃತ್ಯು, ಹಲವರಿಗೆ ಗಾಯ

ರಾಯಚೂರು: ಸಾರಿಗೆ ಬಸ್ ಹಾಗೂ ಖಾಸಗಿ ಶಾಲಾ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮಕ್ಕಳು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಹೊರವಲಯದಲ್ಲಿ ಗುರುವಾರ ನಡೆದಿದೆ.

ಮೃತಪಟ್ಟಿರುವ ವಿದ್ಯಾರ್ಥಿಗಳನ್ನು ಸಮರ್ಥ ಅಮರೇಶ(7) ಹಾಗೂ ಶ್ರೀಕಾಂತ್ ಮಾರೇಶ(12) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ 15 ವಿದ್ಯಾರ್ಥಿಗಳಿಗೆ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಶಾಲಾ ಬಸ್ ಚಾಲಕ ಹಾಗೂ ಓರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಮನೆಯವರಿಗೆ ಮಾತ್ರ ಬಿಡೋದಾದ್ರೆ ನಾನು ದರ್ಶನ್‌ ರನ್ನ ಮದ್ವೆ ಆಗ್ತೀನಿ: ಬಳ್ಳಾರಿ ಸೆಂಟ್ರಲ್ ಜೈಲು ಮುಂದೆ ಮಹಿಳೆ ರಂಪಾಟ – vishwanews24

ಮಾನ್ವಿಯಿಂದ ರಾಯಚೂರಿಗೆ ಹೊರಟಿದ್ದ ಸಾರಿಗೆ ಬಸ್ ಹಾಗೂ ಶಾಲಾ ಮಕ್ಕಳನ್ನು ಕರೆದುಕೊಂಡು ಮಾನ್ವಿ ಕಡೆಗೆ ತೆರಳುತ್ತಿದ್ದ ಬಸ್ ಮಧ್ಯೆ ಢಿಕ್ಕಿ ಹೊಡೆದು ಈ ದುರ್ಘಟನೆ ಜರುಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಸಾರ್ವಜನಿಕರ ಸಹಾಯದಿಂದ ರಿಮ್ಸ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

Leave a Reply