ಸಾಲ ಮರುಪಾವತಿ ವಿಳಂಬವಾಗಿದ್ದಕ್ಕೆ ಪತ್ನಿ-ಪುತ್ರನ ಗೃಹಬಂಧನ ; ಮನನೊಂದು ರೈತ ಆತ್ಮಹತ್ಯೆ – vishwanews24

Featured, ರಾಜ್ಯ ನ್ಯೂಸ್

ಸಾಲ ಮರುಪಾವತಿ ವಿಳಂಬವಾಗಿದ್ದಕ್ಕೆ – ಪತ್ನಿ-ಪುತ್ರನ ಗೃಹಬಂಧನ ; ಮನನೊಂದು ರೈತ ಆತ್ಮಹತ್ಯೆ

ಬೆಳಗಾವಿ: ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ರೈತನೋರ್ವ ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭೀಕರ ಬರಕ್ಕೆ ಬೆಳೆ ಕೈಕೊಟ್ಟಿದ್ದು ಜೀವನ ನಡೆಸಲು ಸಾಲ ಮಾಡಿದ್ದರು.

ಸಾಲ ಮರುಪಾವತಿ ವಿಳಂಬವಾಗಿದ್ದಕ್ಕೆ ಸಾಲ ನೀಡಿದ್ದ ಮಹಿಳೆ ರೈತನ ಪತ್ನಿ, ಪುತ್ರನಿಗೆ ಗೃಹಬಂಧನ ಮಾಡಿದ್ದಾಳೆ. ಪತ್ನಿ-ಪುತ್ರನನ್ನು ಗೃಹಬಂಧನದಲ್ಲಿ ಇಟ್ಟಿದ್ದಕ್ಕೆ ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಗಳೂರು/ಉಡುಪಿ: ಕಡಲ ತೀರದಲ್ಲಿ ಹೈಅಲರ್ಟ್ – ಸಮುದ್ರ ಪ್ರಕ್ಷುಬ್ದ; ಮೀನುಗಾರರು ಹಾಗೂ ಪ್ರವಾಸಿಗರು ಸಮುದ್ರಕ್ಕಿಳಿಯದಂತೆ ಜಿಲ್ಲಾಡಳಿತ ಎಚ್ಚರಿಕೆ – vishwanews24

ರಾಜು ಖೋತಗಿ‌ ಎಂಬ ರೈತ ಇಸ್ಲಾಂಪುರ ಗ್ರಾಮದ ಸಿದ್ದವ್ವ ಬಯ್ಯನವರ ಎಂಬ ಮಹಿಳೆ ಬಳಿ ಐದು ತಿಂಗಳ ಹಿಂದೆ ಒಂದೂವರೆ ಲಕ್ಷ ಸಾಲ ಪಡೆದಿದ್ದರು. ಪಡೆದಿದ್ದ ಸಾಲಕ್ಕೆ ಪ್ರತಿ ತಿಂಗಳು ಶೇ. 10ರಷ್ಟು ಬಡ್ಡಿ ಸಹ ನೀಡುತ್ತಿದ್ದರು.

ಎರಡು ದಿನಗಳ ಹಿಂದೆ ಸಿದ್ದವ್ವ ಏಕಾಏಕಿ ರಾಜು ಅವರನ್ನು ಮನೆಗೆ ಕರೆದು ಕೊಟ್ಟ ಸಾಲ ಮರಳಿಸುವಂತೆ ತಾಕೀತು ಮಾಡಿದ್ದಾರೆ. ಸಾಲ ಮರಳಿಸಲು ಒಂದೆರಡು ದಿನ ಕಾಲಾವಕಾಶ ಕೇಳಿದಕ್ಕೆ ಇದಕ್ಕೆ ಒಪ್ಪದ ಮಹಿಳೆಯು ರೈತ, ಪತ್ನಿ ಹಾಗೂ ಪುತ್ರನನ್ನು ಗೃಹ ಬಂದನದಲ್ಲಿಟ್ಟಿದ್ದಳು. ಒಂದು ದಿನದ ಬಳಿಕ ರಾಜುನನ್ನು ಬಿಡುಗಡೆ ಮಾಡಿ, ಮಗ ಮತ್ತು ಪತ್ನಿಯನ್ನು ಗೃಹಬಂಧನದಲ್ಲಿಟ್ಟಳು.

ಎಲ್ಲೇ ಇದ್ದರೂ ವಾಪಸ್ ಬಂದು ತನಿಖೆಗೆ ಸಹಕರಿಸು , ಕೈಮುಗಿದು ಕೇಳಿಕೊಳ್ಳುತ್ತೇನೆ : ಪ್ರಜ್ವಲ್‌ಗೆ ಹೆಚ್‌ಡಿಕೆ ಮನವಿ -vishwanews24

Leave a Reply