ಸಿಎಂ ಕುಮಾರಣ್ಣನವರ ಆಳ್ವಿಕೆಯಲ್ಲಿ ರಾಜ್ಯ ರಾಮರಾಜ್ಯವಾಗುತ್ತದೆ-ಸಚಿವ ಜಿ.ಟಿ.ದೇವೇಗೌಡ
ರಾಮನಗರ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶ್ರೀರಾಮನಿದ್ದಂತೆ. ಇನ್ನು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಆಂಜನೇಯನಿದ್ದಂತೆ. ರಾಮನಗರದ ಜನ ಸೀತಾದೇವಿ (ಅನಿತಾ ಕುಮಾರಸ್ವಾಮಿ) ಅವರನ್ನು ರಾಮನಗರಕ್ಕೆ ಕರೆತನ್ನಿ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅಭಿಪ್ರಾಯ ಪಟ್ಟಿದ್ದಾರೆ.
ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಾ ಮಾತನಾಡಿ, ರಾಮ ಹಾಗೂ ಆಂಜನೇಯನ ಜತೆ ಸೀತಾಮಾತೆಯನ್ನ ಕರೆತಂದ್ರೆ ರಾಮನಗರ ಅಲ್ಲದೇ ರಾಜ್ಯವೂ ಕೂಡಾ ರಾಮರಾಜ್ಯವಾಗುತ್ತದೆ ಎಂದರು.
ರೇವಣ್ಣ ಅವರು ಹಗಲು ರಾತ್ರಿ ಅಭಿವೃದ್ಧಿ ಕಾರ್ಯಕ್ಕಾಗಿ ಶ್ರಮಿಸುತ್ತಿದ್ದಾರೆ. ಈಗ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತ್ತಷ್ಟು ಬಲ ಬರಲು ಮುಂಬರುವ ಉಪಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಅವರನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.
ಜನತಾ ದರ್ಶನ, ಗ್ರಾಮ ವಾಸ್ತವ್ಯ ಮೂಲಕ ಎಚ್.ಡಿ.ಕುಮಾರಸ್ವಾಮಿ ಇತರರಿಗೆ ಮಾದರಿಯಾಗಿದ್ದಾರೆ. ಉಪ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಅವರು ಆಯ್ಕೆಯಾದರೆ ರಾಮನಗರದ ಜತೆಗೆ ರಾಜ್ಯವೂ ಸಮೃದ್ಧವಾಗಿ ಪ್ರಗತಿ ಹೊಂದುತ್ತದೆ ಎಂದರು.
