ಸಿಎಂ ಫ್ಯಾಶನ್ ಶೋ , ಪೋಟೋ ಶೂಟ್ ಗಾಗಿ ಮಳೆಹಾನಿ ಪ್ರದೇಶಗಳಿಗೆ ಹೋಗಿದ್ದಾರೆ : ಬಿ.ಕೆ. ಹರಿಪ್ರಸಾದ್ – Vishwanews24
ಸಿಎಂ ಫ್ಯಾಶನ್ ಶೋ , ಪೋಟೋ ಶೂಟ್ ಗಾಗಿ ಮಳೆಹಾನಿ ಪ್ರದೇಶಗಳಿಗೆ ಹೋಗಿದ್ದಾರೆ : ಬಿ.ಕೆ. ಹರಿಪ್ರಸಾದ್
ನವದೆಹಲಿ : ಸಿಎಂ ಬಸವರಾಜ ಬೊಮ್ಮಾಯಿ ಅವರು ಫ್ಯಾಶನ್ ಶೋಗೆ ಮಳೆಹಾನಿ ಪ್ರದೇಶಗಳಿಗೆ ಹೋಗಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಲೇವಡಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರು ಫ್ಯಾಶನ್ ಶೋಗೆ ಮಳೆಹಾನಿ ಪ್ರದೇಶಗಳಿಗೆ ಹೋಗಿದ್ದಾರೆ. ಪೋಟೋ ಶೂಟ್ ಗಾಗಿ ಮಳೆಹಾನಿ ಪ್ರದೇಶಕ್ಕೆ ಹೋಗಿದ್ದಾರೆ. ರಾತ್ರಿ ಹೋಗಿ ಪ್ರವಾಹ ಪರಿಸ್ಥಿತಿ ಅಧ್ಯಯನ ಮಾಡಲಾಗುತ್ತಾ? ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯಾದ್ಯಂತ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ.
