ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರು ಅವರಿಗೆ ಗೌರವ ಕೊಡಲೇಬೇಕು : ಡಿ.ಕೆ.ಶಿ -Vishwanews24

Featured, ರಾಷ್ಟ್ರ ನ್ಯೂಸ್

ಹೊಸದಿಲ್ಲಿ: ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರು ಅವರಿಗೆ ಗೌರವ ಕೊಡಲೇಬೇಕು ಎಂದು ಸಚಿವ ಡಿ.ಕೆ.ಶಿವಕುಮಾರ್‌ ಅವರು ಶಾಸಕ ರೋಷನ್‌ ಬೇಗ್‌ ಅವರ ಅಮಾನತು ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ್ದಾರೆ.

ಬುಧವಾರ ಹೊಸದಿಲ್ಲಿಯಲ್ಲಿ ಸುದ್ದಿಗಾರರು ರೋಷನ್‌ ಬೇಗ್‌ ಅವರ ಅಮಾನತು ವಿಚಾರದ ಕುರಿತು ಪ್ರಶ್ನಿಸಿದಾಗ, ನನಗೆ ಈ ಬಗ್ಗೆ ತಿಳಿದಿರಲಿಲ್ಲ. ಬೆಳಗ್ಗೆ ಯಾರೋ ಎಐಸಿಸಿಯಲ್ಲಿ ಮಾಹಿತಿ ನೀಡಿದರು. ಈ ಬಗ್ಗೆ ಕೇಳಿ ಹೇಳುತ್ತೇನೆ ಎಂದರು.

ನಾವೆಲ್ಲ ಗಾಂಧಿ ಕಟುಂಬಕ್ಕೆ, ಪಕ್ಷಕ್ಕೆ ನಿಷ್ಠೆ ಉಳ್ಳವರು. ಯಾವತ್ತೂ ವ್ಯಕ್ತಿ ಪೂಜೆ ಮಾಡಬಾರದು, ಪಕ್ಷದ ಪೂಜೆ ಮಾಡಬೇಕು ಎಂದರು.

ಸಿದ್ದರಾಮಯ್ಯ ಸಿಎಲ್‌ಪಿ ನಾಯಕ ಅವರಿಗೆ ಗೌರವ ಕೊಡಲೇಬೇಕು . ಕಾಂಗ್ರೆಸ್‌ ಶಾಸಕರು ಸೇರಿದಂತೆ ಎಲ್ಲರಿಗೂ ಅವರವರಿಗೆ ಕೊಡಬೇಕಾದ ಗೌರವ ನೀಡಿದೆ ಎಂದರು.

ನನಗೆ ಇನ್ನೇನು ಗೊತ್ತಿಲ್ಲ. ನನಗೆ ಏನೂ ಮಾತನಾಡಬಾರುದು ಎಂದಿದ್ದಾರೆ, ಹಾಗಾಗಿ ನಾನು ಹೆಚ್ಚೇನು ಮಾತನಾಡುವುದಿಲ್ಲ ಎಂದರು.