ಸಿದ್ಧಾರ್ಥ್ ಸಾವು ತೀವ್ರ ಆಘಾತ ಮತ್ತು ನೋವು ತಂದಿದೆ : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ -Vishwanews24
ಬೆಂಗಳೂರು : ಕಾಫಿ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ದುಡುಕಿ ಬಿಟ್ಟರು, ಅವರ ಸಾವು ತೀವ್ರ ಆಘಾತ ಮತ್ತು ನೋವು ತಂದಿದೆ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಕೊಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಿದ್ಧಾರ್ಥ್ ಒಬ್ಬ ಆಗರ್ಭ ಶ್ರೀಮಂತ. ಕಾಫಿ ಡೇಯನ್ನು ಸಿದ್ಧಾರ್ಥ್ ಇಡೀ ಪ್ರಪಂಚಕ್ಕೆ ಪರಿಚಯಿಸಿದವರು. ಆದರೇ ಇಂತಹ ಸಿದ್ಧಾರ್ಥ್ ಅವರು ದುಡುಕಿಬಿಟ್ಟರು. ಆ ಸಂದರ್ಭದಲ್ಲಿ ಅವರ ಜೊತೆ ಯಾರಾದರೂ ಒಬ್ಬರು ಇದ್ದರೂ ಈ ಘಟನೆ ನಡೆಯುತ್ತಿರಲಿಲ್ಲ ಎಂದು ತಿಳಿಸಿದರು.
ಕಳೆದ ಮಂಗಳವಾರ ಸಿದ್ಧಾರ್ಥ್ ಅವರ ಮನಗೆ ಹೋಗಿ ಸಾಂತ್ವಾನ ಹೇಳಿ ಬಂದಿದ್ದೆ. ಮಾಜಿ ಸಿಎಂ ಎಸ್ ಎಂ ಕೃಷ್ಣಾ ಅವರನ್ನು ಭೇಟಿ ಮಾಡಿ ದುಃಖ ತಡೆದುಕೊಳ್ಳುವ ಶಕ್ತಿಯನ್ನು ಭರಿಸಲು ಸಾಂತ್ವಾನಿಸಿದ್ದೆ. ಇದೀಗ ಸಿದ್ಧಾರ್ಥ್ ಅವರ ಅಂತ್ಯಕ್ರಿಯೆ ಎಲ್ಲಿ ನಡೆಯುತ್ತದೋ ಅಲ್ಲಿಗೆ ತೆರಳಿ, ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.
