ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

Featured, ದಕ್ಷಿಣ ಕನ್ನಡ

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ

ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಮತ್ತೆ ಬಜಪೆಗೆ ಆಗಮಿಸಿದ್ದಾರೆ.

ಎನ್‌ಐಎ ಡಿವೈಎಸ್ಪಿ ರಾಜೀವ್‌ ಸಿಂಗ್‌, ಇನ್‌ಸ್ಪೆಕ್ಟರ್‌ ಮಲ್ಲಿಕಾರ್ಜುನ್‌ ಸಹಿತ ಐವರು ಅಧಿಕಾರಿಗಳ ತಂಡ ಮಂಗಳವಾರ ಬಜಪೆ ಪೊಲೀಸ್‌ ಠಾಣೆಗೆ ಆಗಮಿಸಿದ್ದು, ನಿಷೇಧಿತ ಪಿಎಫ್‌ಐ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದರು ಎನ್ನುವ ಮಾಹಿತಿ ಆಧಾರದಲ್ಲಿ ಮೂವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದೆ.

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಕಳೆದ ಒಂದು ವರ್ಷದಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ತನಿಖೆ ನಡೆಸುತ್ತಿದೆ. 2025ರ ಆ. 2ರಂದು ಮಂಗಳೂರು ಹೊರವಲಯದ ಸುರತ್ಕಲ್‌ ಮತ್ತು ಬಜಪೆ ಠಾಣೆ ವ್ಯಾಪ್ತಿಯ 14 ಸ್ಥಳಗಳ ಮೇಲೆ ದಾಳಿ ನಡೆಸಿದ್ದ ಎನ್‌ಐಎ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಒಯ್ದಿದ್ದರು.

2025ರ ಮೇ 1ರಂದು ಬಜಪೆ ಬಳಿಯ ಕಿನ್ನಿಪದವು ಎಂಬಲ್ಲಿ ರಾತ್ರಿ ಸುಹಾಸ್‌ ಶೆಟ್ಟಿ ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಪಿಎಫ್‌ಐ ಕಾರ್ಯಕರ್ತರು ಸೇರಿ 12 ಮಂದಿಯನ್ನು ಬಂಧಿಸಲಾಗಿತ್ತು. ವಿದೇಶದಿಂದ ಫಂಡಿಂಗ್‌ ಆಗಿರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಎನ್‌ಐಎ ತನಿಖೆಗೆ ವಹಿಸಲಾಗಿತ್ತು.

ಉಡುಪಿ: ನಿರೀಕ್ಷಿತ ಮುಂಗಾರು ಮಳೆಯಿಲ್ಲದೆ ಕಡಲಿಗೆ ಇಳಿಯದ ನಾಡದೋಣಿಗಳು – vishwanews24

Leave a Reply