ಸೋಲಿನ ಭೀತಿ ಎದುರಾಗಿದ್ದು ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಲ್ಲ : ಈಶ್ವರಪ್ಪ -Vishwanews24

Featured, ರಾಜ್ಯ ನ್ಯೂಸ್

ಸೋಲಿನ ಭೀತಿ ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ  ಸ್ಪರ್ಧಿಸಲ್ಲ : ಈಶ್ವರಪ್ಪ -Vishwanews24

ಹುಬ್ಬಳ್ಳಿ : ಮಾಜಿ ಸಿಎಂ ಸಿದ್ದರಾಮಯ್ಯಗೆ ಸೋಲಿನ ಭೀತಿ ಎದುರಾಗಿದ್ದು, ಮುಂದಿನ ಬಾರಿಯ ಚುನಾವಣೆಯಲ್ಲಿ ಅವರು ನೂರಕ್ಕೆ ನೂರು ನಿಲ್ಲಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರದ್ದು ಡಬಲ್ ಸ್ಟಾಂಡರ್ಡ್ ನಿಲುವು, ಮೊದಲು ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದರು. ಎರಡೆರಡು ಕಡೆಗಳಲ್ಲಿ ನಿಂತರು. ಮತ್ತೆ ಬಾದಾಮಿಯಲ್ಲಿ ನಿಲ್ಲುವುದಾಗಿ ಹೇಳಿದ್ದಾರೆ. ಮುಂದಿನ ಬಾರಿ ಅವರು ನೂರಕ್ಕೆ ನೂರು ಚುನಾವಣೆಗೆ ನಿಲ್ಲಲ್ಲ. ಸಿದ್ದರಾಮಯ್ಯ ಅವರಿಗೆ ಸೋಲಿನ ಭೀತಿ ಎದುರಾಗಿದೆ ಎಂದರು.

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ನಮ್ಮ ಸಂಘಟನೆ ನೋಡಿ ಕಾಂಗ್ರೆಸ್, ಜೆಡಿಎಸ್ ಗೆ ದಿಕ್ಕು ತೋಚುತ್ತಿಲ್ಲ. ಹಿಂದಿನ ಎಲ್ಲ ಉಪಚುನಾವಣೆಗಳಲ್ಲಿ ನಾವೇ ಗೆದ್ದಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಪೂರ್ಣ ಬಹುಮತ ನೀಡಿದರೆ ಗೊಂದಲ ಆಗುತ್ತಿರಲಿಲ್ಲ ಎಂದರು.

ಇದನ್ನೂ ಓದಿ : ಪುತ್ತೂರು : ಗಡಿಭದ್ರತಾ ಪಡೆಗೆ ಆಯ್ಕೆಯಾದ ಪುತ್ತೂರಿನ ಇಬ್ಬರು ಯುವತಿಯರು -Vishwanews24