ಹಂಪಿ ಉತ್ಸವಕ್ಕೆ ಆರ್ಥಿಕ ನೆರವು ನಾನು ನೀಡುತ್ತೇನೆ, ಉತ್ಸವ ಅದ್ದೂರಿಯಾಗಿ ನಡೆಯಲಿ, : ಜನಾರ್ಧನ ರೆಡ್ಡಿ
ಬೆಂಗಳೂರು: ವಿಶ್ವ ಪ್ರಖ್ಯಾತ ಹಂಪಿ ಉತ್ಸವ ಯಾವುದೇ ಕಾರಣಕ್ಕೂ ನಿಲ್ಲುವುದು ಬೇಡ. ಉತ್ಸವಕ್ಕೆ ಅಗತ್ಯವಾದ ಆರ್ಥಿಕ ಹಾಗೂ ಇತರ ನೆರವನ್ನು ತಾವೇ ನೀಡುವುದಾಗಿ ಗಣಿ ಧಣಿ, ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.
ಹಂಪಿ ಉತ್ಸವಕ್ಕೆ ತನ್ನದೇ ಆದ ಪರಂಪರೆ ಇದೆ, ಇದನ್ನು ಅದ್ದೂರಿಯಾಗೇ ಆಚರಿಸೋಣ, ಆರ್ಥಿಕ ನೆರವು ಸೇರಿ ಯಾವುದೇ ಸಹಕಾರ ನೀಡಲು ನಾನು ಸಿದ್ದನಿದ್ದೇನೆ ಎಂದು ಅವರು ಘೋಷಿಸಿದ್ದಾರೆ.
ನವೆಂಬರ್ 3 ರಂದು ನಡೆದ ಲೋಕಸಭೆ ಉಪ ಚುನಾವಣೆಯಲ್ಲಿ ಅಕ್ರಮವಾಗಿ ಸಾಕಷ್ಟು ದುಡ್ಡು ಖರ್ಚು ಮಾಡಿರುವವರಿಗೆ ಮತ್ತು ಕೃತಜ್ಞತಾ ಸಮಾವೇಶ ನಡೆಸಿರುವವರಿಗೆ ಬರಗಾಲ ಕಾಣಿಸಲಿಲ್ಲವೇ? ಬಿಜೆಪಿ ಹಿರಿಯ ನಾಯಕ, ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಅವರು ಕೃತಜ್ಞತಾ ಸಮಾವೇಶದ ಬದಲು ರೈತರಿಗೆ ನೆರವು ನೀಡಿ ಎಂದು ಬಿನ್ನವಿಸಿಕೊಂಡರೂ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಕೃತಜ್ಞತಾ ಸಮಾವೇಶ ನಡೆಸುವುದು ಅಗತ್ಯವಿತ್ತೇ? ಉಪ ಚುನಾವಣೆಗೆ ನೀರಿನಂತೆ ಹಣ ಖರ್ಚು ಮಾಡಲು ಮತ್ತು ಕೃತಜ್ಞತಾ ಸಮಾವೇಶ ನಡೆಸುವಲ್ಲಿ ಆಸಕ್ತಿ ತೋರುವವರು ಹಂಪಿ ಉತ್ಸವ ಆಚರಣೆಗೆ ಅಸಡ್ಡೆ ತೋರುವುದೇಕೆ? ಎಂದು ಜನಾರ್ಧನರೆಡ್ಡಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

