ಹಾಸನ: ಗೃಹಿಣಿ ಅನುಮಾನಾಸ್ಪದ ಸಾವು; ಪತಿಯೇ ಕೊಲೆಗೈದಿರುವ ಶಂಕೆ – Vishwanews24
ಹಾಸನ: ಗೃಹಿಣಿ ಅನುಮಾನಾಸ್ಪದ ಸಾವು; ಪತಿಯೇ ಕೊಲೆಗೈದಿರುವ ಶಂಕೆ
ಹಾಸನ: ವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನಾಗಯ್ಯನಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ. ಸುರಭಿ (24) ಮೃತ ದುರ್ದೈವಿ.
ಹುಣಸೂರಿನ ಸುರಭಿ ಮೂರು ವರ್ಷದ ಹಿಂದೆ ನಾಗಯ್ಯನಕೊಪ್ಪಲು ಗ್ರಾಮದ ದರ್ಶನ್ ಎಂಬಾತನ ಜತೆ ವಿವಾಹವಾಗಿದ್ದಳು. ನಿನ್ನೆ ಗುರುವಾರ ಅಳಿಯ ದರ್ಶನ್ ಸುರಭಿ ಪೋಷಕರಿಗೆ ಕರೆ ಮಾಡಿ, ನಿಮ್ಮ ಮಗಳು ಲೋ ಬಿಪಿಯಾಗಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾನೆ.
ವೇಣೂರಿನ ಬಾಹುಬಲಿ ಸ್ವಾಮಿಗೆ 12 ವರ್ಷಗಳ ಬಳಿಕ ಅದ್ಧೂರಿ ಮಹಾಮಸ್ತಕಾಭಿಷೇಕ – Vishwanews24
ಇತ್ತ ಸುರಭಿ ಪೋಷಕರು, ಪತಿಯೇ ಕೊಲೆ ಮಾಡಿದ್ದಾನೆಂದು ಆರೋಪಿಸಿದ್ದಾರೆ. ದರ್ಶನ್ಕ್ಕೆ ಬೇರೊಬ್ಬರ ಜತೆ ಅಕ್ರಮ ಸಂಬಂಧವಿತ್ತು. ಇದನ್ನು ಪ್ರಶ್ನಿಸುತ್ತಿದ್ದ ಸುರಭಿಯನ್ನು ನೇಣುಬಿಗಿದು ಕೊಲೆ ಮಾಡಿ ನಾಟಕವಾಡುತ್ತಿದ್ದಾರೆ ಎಂದು ಸುರಭಿ ಪೋಷಕರು ಗಂಭೀರ ಆರೋಪವನ್ನು ಮಾಡಿದ್ದಾರೆ.
ಮೃತದೇಹವನ್ನು ಶ್ರವಣಬೆಳಗೊಳ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಶ್ರವಣಬೆಳಗೊಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ನಮ್ಮ ಕುಟುಂಬದ ಹೆಣನೂ ಬಿಜೆಪಿ ಕಡೆ ಹೋಗಲ್ಲ : ಪ್ರಿಯಾಂಕ್ ಖರ್ಗೆ – Vishwanews24
