ಹಾಸನ: ಹೃದಯಾಘಾತ – ಸಾಫ್ಟ್‌ವೇ‌ರ್ ಇಂಜಿನಿಯ‌ರ್ ಸಾವು – vishwanews24

Featured, ರಾಜ್ಯ ನ್ಯೂಸ್

ಹಾಸನ: ಹೃದಯಾಘಾತ – ಸಾಫ್ಟ್‌ವೇ‌ರ್ ಇಂಜಿನಿಯ‌ರ್ ಸಾವು

ಹಾಸನ: ಸಕಲೇಶಪುರ ತಾಲ್ಲೂಕಿನ ರಾಮೇನಹಳ್ಳಿ ಗ್ರಾಮದ ಸಾಫ್ಟ್‌ವೇ‌ರ್ ಇಂಜಿನಿಯ‌ರೊಬ್ಬರು ಹೃದಯಾಘಾತದಿಂದ ರವಿವಾರ ಸಂಜೆ ಮೃತಪಟ್ಟಿದ್ದಾರೆ.

ಬೆಂಗಳೂರಿನ ಸಾಫ್ಟ್‌ವೇರ್ ಕಂಪೆನಿಯೊಂದರ ಉದ್ಯೋಗಿಯಾಗಿದ್ದ ಸಮರ್ಥ್ (26) ಮೃತ ಯುವಕ. ಕಳೆದ ಕೆಲವು ತಿಂಗಳುಗಳಿಂದ ‘ವರ್ಕ್ ಪ್ರಂ ಹೋಮ್’ ಸೌಲಭ್ಯ ಪಡೆದು ಮನೆಯಲ್ಲಿಯೇ ಕೆಲಸ ಮಾಡುತ್ತಿದ್ದರು.

ಪ್ರತಿ ವರ್ಷ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಇದ್ದೇ ಇರುತ್ತದೆ ಅದನ್ನೆ ರಾಜಕೀಯ ಮಾಡಬಾರದು: ದಿನೇಶ್ ಗುಂಡೂರಾವ್ – vishwanews24

ನಿನ್ನೆ ಬೆಳಗಿನ ಜಾವದವರೆಗೆ ಕೆಲಸ ಮಾಡಿದ್ದ ಆತ ಸಂಜೆ ಎದ್ದು ನೀರು ಕುಡಿದ ನಂತರ ಹಠಾತ್ ಕುಸಿದು ಬಿದ್ದರು ಎನ್ನಲಾಗಿದೆ. ತಕ್ಷಣವೇ ಕುಟುಂಬಸ್ಥರು ವೈದ್ಯರನ್ನು ಕರೆಸಿದರೂ, ತಪಾಸಣೆ ವೇಳೆ ಸಮರ್ಥ್ ಮೃತಪಟ್ಟಿರುವುದಾಗಿ ವೈದ್ಯರು ದೃಢೀಕರಿಸಿದರು.

Leave a Reply