ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

Featured, ಉಡುಪಿ

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ

ಉಡುಪಿ: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಲಿರುವ ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧಿಸಿರುವುದನ್ನು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಉಡುಪಿ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.

ಪ್ರತಿವರ್ಷ ಜಿಲ್ಲೆಯಲ್ಲಿ ನಡೆಯುವ ಪಂಜಿನ ಮೆರವಣಿಗೆಯು ದೇಶಕ್ಕಾಗಿ ಬಲಿದಾನಗೈದ ವೀರ ಪುರುಷರ ಇತಿಹಾಸವನ್ನು ಯುವ ಸಮುದಾಯಕ್ಕೆ ಪರಿಚಯಿಸುವ ಹಾಗೂ ಜಾಗೃತಿ ಮೂಡಿಸುವ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದಿಂದ ಸಮಾಜದಲ್ಲಿ ಯಾವುದೇ ಅಶಾಂತಿ ಉಂಟಾಗುವುದಿಲ್ಲ ಎಂದು ವಿಹಿಂಪ–ಬಜರಂಗದಳದ ಮುಖಂಡರು ತಿಳಿಸಿದ್ದಾರೆ.

ಕಟಪಾಡಿ: ಮಟ್ಟು ಬೀಚ್‌ನಲ್ಲಿ ಮುಂದುವರಿದ ಕಡಲ್ಕೊರೆತ – vishwanews24

ಪಂಜಿನ ಮೆರವಣಿಗೆ ಕಾರ್ಯಕ್ರಮಕ್ಕೆ ಆಗಮಿಸಲಿರುವ ಬಜರಂಗದಳ ಮುಖಂಡ ಪುನೀತ್ ಅತ್ತಾವರ ಹಾಗೂ ಹಿಂದೂ ಜಾಗರಣ ವೇದಿಕೆಯ ನರಸಿಂಹ ಮಾಣಿ ಅವರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿಯಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಆರೋಪಿಸಿದ್ದಾರೆ.

ಹಿಂದೂ ಸಂಘಟನೆಗಳ ವಿರುದ್ಧ ಇಂತಹ ದಮನಕಾರಿ ಕ್ರಮಗಳನ್ನು ಮುಂದುವರಿಸಿದರೆ, ಮುಂದಿನ ದಿನಗಳಲ್ಲಿ ಎಲ್ಲಾ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

Leave a Reply