ಹಿಜಾಬ್ ಕುರಿತಾಗಿ ಹೈಕೋರ್ಟ್ ಆದೇಶ ‌ವಿರೋಧಿಸಿ ಕರ್ನಾಟಕ ಬಂದ್ ಕರೆ ಕೊಟ್ಟವರು ಕಾನೂನು ಹಾಗೂ ಸಂವಿಧಾನದ ವಿರೋಧಿಗಳು : ಆರ್.‌ಅಶೋಕ್ – Vishwanews24

Featured, ರಾಜ್ಯ ನ್ಯೂಸ್

ಹಿಜಾಬ್ ಕುರಿತಾಗಿ ಹೈಕೋರ್ಟ್ ಆದೇಶ ‌ವಿರೋಧಿಸಿ ಕರ್ನಾಟಕ ಬಂದ್ ಕರೆ ಕೊಟ್ಟವರು ಕಾನೂನು ಹಾಗೂ ಸಂವಿಧಾನದ ವಿರೋಧಿಗಳು : ಆರ್.‌ಅಶೋಕ್ – Vishwanews24

ಬೆಂಗಳೂರು: ಹಿಜಾಬ್ ಕುರಿತಾಗಿ ಹೈಕೋರ್ಟ್ ಆದೇಶ ‌ವಿರೋಧಿಸಿ ಕರ್ನಾಟಕ ಬಂದ್ ಕರೆ ಕೊಟ್ಟವರು ಕಾನೂನು ಹಾಗೂ ಸಂವಿಧಾನದ ವಿರೋಧಿಗಳು ಎಂದು ಕಂದಾಯ ಸಚಿವ ಆರ್.‌ಅಶೋಕ್ ಕಿಡಿಕಾರಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಹೈಕೋರ್ಟ್ ಆದೇಶ ಬಂದ ಮೇಲೆ ಅದು ಕಾನೂನು. ಆ ಕಾನೂನು ಯಾರು ಪಾಲನೆ ಮಾಡಲ್ಲವೋ‌ ಅವರು ಕಾನೂನು ವಿರೋಧಿಗಳು, ಸಮಾಜದ ವಿರೋಧಿಗಳು ಎಂದರು. ಯಾರೇ ಇರಬಹುದು ಎಷ್ಟೇ ದೊಡ್ಡವರು ಇರಬಹುದು. ಹೈಕೋರ್ಟ್ ಆದೇಶವನ್ನು ವಿರೋಧಿಸುತ್ತಾರೆ ಎಂದರೆ ಅವರು ಕಾನೂನು ವಿರೋಧಿ, ಸಂವಿಧಾನ ವಿರೋಧಿಗಳು.‌ ಅಂತವರ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ಎಚ್ಚರಿಕೆ ನೀಡಿದರು.

ಹಿಜಾಬ್ ವಿಚಾರವಾಗಿ ಹೈಕೋರ್ಟ್ ಆದೇಶದ ಬೆನ್ನಲ್ಲೇ ಕರ್ನಾಟಕ ಬಂದ್‌ಗೆ ಮುಸ್ಲಿಂ ಸಂಘಟನೆಗಳು ಕರೆ ಕೊಟ್ಟಿವೆ. ಮುಸ್ಲಿಂ ಪ್ರಾಬಲ್ಯದ ಪ್ರದೇಶಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಮುಸ್ಲಿಮರು ಬಂದ್ ನಡೆಸುತ್ತಿದ್ದಾರೆ.

ಮಂಗಳೂರಿನ ಅಪ್ಪಟ ‘ಅಪ್ಪು’ ಅಭಿಮಾನಿ ಕೈಚಳಕದಲ್ಲಿ ಲೈಫ್ ಬಾಯ್ ಸೋಪ್​​ನಲ್ಲಿ ಮೂಡಿದ ‘ಅಪ್ಪು – Vishwanews24

Leave a Reply