ಹಿಜಾಬ್- ಕೇಸರಿ ವಿವಾದದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ-ಕಾಪು ಪೇಟೆಯಲ್ಲಿ ಪೊಲೀಸ್ ಪಥಸಂಚಲನ: vishwanews24
ಹಿಜಾಬ್- ಕೇಸರಿ ವಿವಾದದ ಹಿನ್ನೆಲೆ-ಕಾಪು ಪೇಟೆಯಲ್ಲಿ ಪೊಲೀಸ್ ಪಥಸಂಚಲನ
ಹಿಜಾಬ್- ಕೇಸರಿ ವಿವಾದದ ಹಿನ್ನೆಲೆ-ಕಾಪು ಪೇಟೆಯಲ್ಲಿ ಪೊಲೀಸ್ ಪಥಸಂಚಲನ
ಕಾಪು, : ಹಿಜಾಬ್- ಕೇಸರಿ ವಿವಾದದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕಾಪು ವೃತ್ತ ವ್ಯಾಪ್ತಿಯ ಪೊಲೀಸರು ಕಾಪು ಪೇಟೆಯಲ್ಲಿಂದು ಬೆಳಗ್ಗೆ ಪಥ ಸಂಚಲನ ನಡೆಸಿದರು.
ಕಾಪು ವೃತ್ತ ನಿರೀಕ್ಷಕ ಪ್ರಕಾಶ್ ನೇತೃತ್ವದಲ್ಲಿ ಕಾಪು, ಪಡುಬಿದ್ರೆ, ಶಿರ್ವ ಠಾಣಾ ವ್ಯಾಪ್ತಿಯ ಸುಮಾರು 90 ಪೊಲೀಸರು ಈ ಪಥ ಸಂಚಲನದಲ್ಲಿ ಭಾಗಿಯಾಗಿದ್ದರು.
, ಪಡುಬಿದಿರೆ ಎಸೈ ಅಶೋಕ್ ಕುಮಾರ್, ಶಿರ್ವ ಎಸೈ ಶ್ರೀಶೈಲಾ,ಕಾಪು ಎಸೈ ರಾಘವೇಂದ್ರ ಸಿ. ಕ್ರೈಂ ಎಸೈ ತಿಮ್ಮೇಶ್ ,ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಡಿಆರ್ ತುಕಡಿ ಕೂಡಾ ಪಾಲ್ಗೊಂಡಿತ್ತು.



