ಹಿಜಾಬ್ – ಕೇಸರಿ ಶಾಲು ವಿವಾದ : ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಶಾಲಾ-ಕಾಲೇಜುಗಳಿಗೆ ಪೊಲೀಸ್ ರಕ್ಷಣೆ : ಅರಗ ಜ್ಞಾನೇಂದ್ರ – Vishwanews24
ಹಿಜಾಬ್ – ಕೇಸರಿ ಶಾಲು ವಿವಾದ : ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಶಾಲಾ-ಕಾಲೇಜುಗಳಿಗೆ ಪೊಲೀಸ್ ರಕ್ಷಣೆ : ಅರಗ ಜ್ಞಾನೇಂದ್ರ – Vishwanews24
ಶಿವಮೊಗ್ಗ:ಕುಂದಾಪುರದ ಸರ್ಕಾರಿ ಕಾಲೇಜಿನಿಂದ ಆರಂಭಗೊಂಡ ವಿವಾದ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ, ಈಗ ರಾಜ್ಯಾಧ್ಯಂತ ಹಬ್ಬಿದೆ.
ಈ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳಲ್ಲಿ ಗಲಾಟೆ ಆಗದಂತೆ ಎಚ್ಚರಿಕೆ ವಹಿಸೋ ಸಂಬಂಧ, ಎಲ್ಲಾ ಶಾಲಾ-ಕಾಲೇಜುಗಳಿಗೆ ರಕ್ಷಣೆಗಾಗಿ ಪೊಲೀಸರನ್ನು ನೇಮಿಸಲಿದೆ.
ಈ ಬಗ್ಗೆ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಗೃಹ ಸಚಿವ ಅರಗ ಜ್ಞಾನೇಂದ್ರ ಹಿಜಾಬ್, ಕೇಸರಿ ಶಾಲು ಧರಿಸಿ ವಿದ್ಯಾರ್ಥಿಗಳು ಕಾಲೇಜಿಗೆ ಬರುವಂತಿಲ್ಲ. ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದೆ. ಇದು ಸಮಾನತೆಯ ಸಂಕೇತವಾಗಿದ್ದು, ಸಮವಸ್ತ್ರ ಧರಿಸಿಯೇ ಬರಬೇಕು ಎಂದು ಹೇಳಿದರು.
ಕೊರೋನಾದಿಂದಾಗಿ ಈಗಾಗಲೇ ಮಕ್ಕಳ ವಿದ್ಯಾಬ್ಯಾಸ ಹಾಳಾಗಿದೆ. ಈಗ ಹಿಜಾಬ್, ಕೇಸರಿ ಶಾಲು ವಿವಾದದಿಂದ ಶಾಲಾ-ಕಾಲೇಜು ನಡೆಯುತ್ತಿಲ್ಲ. ಹಿಜಾಬ್ ವಿವಾದದ ಹಿಂದೆ ಕಾರಣದ ಕೈಗಳ ಕೆಲಸವಿದೆ. ಈ ಬಗ್ಗೆ ಪೊಲೀಸರಿಗೆ ತನಿಖೆ ನಡೆಸಲು ನಿರ್ದೇಶಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರನ್ನು ರಕ್ಷಣೆಗಾಗಿ ನಿಯೋಜಿಸಲಲಾಗುತ್ತದೆ ಎಂದು ತಿಳಿಸಿದರು.
