ಹುಬ್ಬಳ್ಳಿಯಲ್ಲಿ ಮತ್ತೊಂದು ಭೀಕರ ಹತ್ಯೆ :ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಮನಬಂದಂತೆ ಇರಿದು ಯುವತಿಯ ಹತ್ಯಗೈದ ಪಾಗಲ್ ಪ್ರೇಮಿ – Vishwanews24

Featured, ರಾಜ್ಯ ನ್ಯೂಸ್

ಹುಬ್ಬಳ್ಳಿಯಲ್ಲಿ ಮತ್ತೊಂದು ಭೀಕರ ಹತ್ಯೆ :ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯಗೈದ ಪಾಗಲ್ ಪ್ರೇಮಿ

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನು ಚಾಕುವಿನಿಂದ ಮನಬಂದಂತೆ ಇರಿದು ಹತ್ಯಗೈದ ಘಟನೆ ಇಲ್ಲಿನ ವೀರಾಪುರ ಓಣಿ ಕರಿಯಮ್ಮನ ಗುಡಿ ಬಳಿ ಬುಧವಾರ ಬೆಳಗಿನ ಜಾವ ಸಂಭವಿಸಿದೆ.

ವೀರಾಪುರ ಓಣಿಯ ಅಂಜಲಿ ಮೋಹನ ಅಂಬಿಗೇರ (21) ಕೊಲೆಯಾಗಿದ್ದು, ಯಲ್ಲಾಪುರ ಓಣಿಯ ಗಿರೀಶ (ವಿಶ್ವ) ಎಸ್. ಸಾವಂತ ಎಂಬಾತ ಕೊಲೆ ಮಾಡಿದ್ದಾನೆ.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ರಘುಪತಿ ಭಟ್ ನಿವಾಸದಲ್ಲಿ ಚುನಾವಣಾ ಕಚೇರಿ ಉದ್ಘಾಟನೆ – Vishwanews24

ಅಂಜಲಿಯು ಪ್ರೀತಿ ನಿರಾಕರಿಸಿದ್ದಕ್ಕೆ ಹುಚ್ಚು ಪ್ರೇಮಿಯಾದ ಗಿರೀಶ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಮನೆಯ ಬಾಗಿಲು ಬಡೆದಿದ್ದಾನೆ. ಆಗ ಅಂಜಲಿಯೇ ಬಾಗಿಲು ತೆರೆದಾಗ ಚಾಕುವಿನಿಂದ ಮನಬಂದಂತೆ ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ ಎಂದು ಮೂಲಗಳು ತಿಳಿಸಿವೆ.

ಕೃತ್ಯ ಎಸಗಿದ ಗಿರೀಶ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆತನ ತಾಯಿ ಮನೆ ಮನೆಯ ಪಾತ್ರೆ ತೊಳೆಯುವ ಕೆಲಸ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

ಬೆಂಡಿಗೇರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಹಂತಕನ ಪತ್ತೆ ನಡೆಸುತ್ತಿದ್ದಾರೆ.

ಉಡುಪಿ: ಮನನೊಂದು ಮಹಿಳೆ ಆತ್ಮಹತ್ಯೆ – Vishwanews24

 

Leave a Reply