ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಬಂದ ಮೇಲೆ ಗೂಂಡಾರಾಜ್ಯವಾಗಿದೆ : ಉಡುಪಿಯಲ್ಲಿ ನಳಿನ್ ಕುಮಾರ್ ಕಟೀಲ್ – vishwanews24

Featured, ಉಡುಪಿ

ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಬಂದ ಮೇಲೆ ಗೂಂಡಾರಾಜ್ಯವಾಗಿದೆ : ಉಡುಪಿಯಲ್ಲಿ ನಳಿನ್ ಕುಮಾರ್ ಕಟೀಲ್

ಉಡುಪಿ: ಹುಬ್ಬಳ್ಳಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ ವಿಚಾರವಾಗಿ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ,ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಬಂದ ಮೇಲೆ ಗೂಂಡಾರಾಜ್ಯವಾಗಿದೆ.ಸರ್ಕಾರ ಬಂದಾಲೇ ಪಾಕಿಸ್ತಾನ ಕರ ಘೋಷಣೆ ಆಯಿತು. ವಿಜಯೋತ್ಸವದಲ್ಲಿ ಪಾಕಿಸ್ತಾನ ಧ್ವಜ ಹಾರಿತು.ಬೆಳಗಾಂನಲ್ಲಿ ಒಬ್ಬ ಮುನಿಯ ಹತ್ಯೆ ಆಯಿತು.ಹಲ್ಲೆ ಗೂಂಡಾ ಪ್ರವರ್ತನೆಗಳು ನಿತ್ಯ ನಿರಂತರವಾಗಿದೆ ಎಂದು ಹೇಳಿದ್ದಾರೆ.

ವಿಧಾನಸೌಧದ ಒಳಗೆ ಪಾಕಿಸ್ತಾನಕ್ಕೆ ಜಯಕಾರ ಹಾಕಿದವರನ್ನು ಬಂಧನ ಮಾಡಲು ಈ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಅತ್ಯಾಚಾರಗಳು ಜಾಸ್ತಿ ಆಗುತ್ತಿವೆ.ಕೆಡಿಪಿ ಸಭೆಯಲ್ಲಿ ನಮ್ಮ ಶಾಸಕರ ಮೇಲೆ ಕಾಂಗ್ರೆಸ್ ಶಾಸಕರು ಕೈ ಎತ್ತುತ್ತಾರೆ. ಬಳ್ಳಾರಿಯಲಿ ಗುಂಡು ಹೊಡೆಯುತ್ತಾರೆ.ಶಾಸಕರ ಸಹವರ್ತಿ ಅವರದ್ದೇ ಕಾರ್ಯಕರ್ತನನ್ನು ಕೊಲ್ಲುತ್ತಾರೆ.ಇದು ಕಾಂಗ್ರೆಸ್ ಸರಕಾರದ ಮಾನಸಿಕತೆಯನ್ನು ತೋರಿಸುತ್ತದೆ.ಈ ಎಲ್ಲಾ ಕೃತ್ಯಗಳನ್ನು ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳು ಸಮರ್ಥನೆ ಮಾಡುತ್ತಾರೆ.ರಾಮರಾಜ್ಯ ಗಾಂಧಿಯ ಕನಸು ನನಸಾಗಿಲ್ಲ, ಇದು ರಾವಣ ರಾಜ್ಯ.ಕರ್ನಾಟಕ ಲಂಕಾಪುರ ಆಗುತ್ತಿದೆ.ರಾವಣನು ಕೂಡ ಸಿದ್ದರಾಮಯ್ಯನಂತೆ ಬುದ್ಧಿವಂತನಿದ್ದ. ರಾವಣ ಕೂಡ ಸಿದ್ದರಾಮಯ್ಯನವರಂತೆ ಅದ್ಭುತ ಜ್ಞಾನಿಯಾಗಿದ್ದ.ಸಿದ್ದರಾಮಯ್ಯನವರ ಹೆಸರು ಬದಲಾವಣೆ ಯಾಗುತ್ತಿದೆಯಾ ಸಂಶಯ. ನಮ್ಮಲ್ಲೂ ಸೀತೆಯ ಅಪಹರಣವಾಗುತ್ತಿದೆ,ಸೀತೆಯ ಮೇಲೆ ಹಲ್ಲೆಗಳು ನಡೆಯುತ್ತಿದೆ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿದ ಘಟನೆ ಖಂಡನೀಯ : ಬಿ.ಎಸ್.ಯಡಿಯೂರಪ್ಪ – vishwanews24

Leave a Reply