ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ಇಂದು ವಿಚಾರಣೆ – Vishwanews24
ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ಇಂದು ವಿಚಾರಣೆ
ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಮುಕ್ತಾಯವಾಗಲಿದೆ. ಹೀಗಾಗಿ ಇಂದು ಅವರಿಗೆ ನ್ಯಾಯಾಲಯದಲ್ಲಿ ಜಾಮೀನು ಮಂಜೂರಾಗುತ್ತದೋ ಅಥವಾ ಜೈಲು ಶಿಕ್ಷೆಗೆ ಗುರಿಯಾಗುತ್ತಾರೋ ಎಂದು ನಿರ್ಧಾರವಾಗುತ್ತದೆ.
ಮಹಿಳೆ ಮೇಲೆ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ರೇವಣ್ಣ ಅವರು ಎ1 ಆರೋಪಿಯಾಗಿದ್ದಾರೆ. ಹೀಗಾಗಿ ರೇವಣ್ಣರ ಹೆಚ್ಚಿನ ವಿಚಾರಣೆ ಅವಶ್ಯಕತೆ ಇದೆ ಎಂದು ಎಸ್ಐಟಿ ಅಧಿಕಾರಿಗಳು ನಾಲ್ಕು ದಿನ ಕಸ್ಟಡಿಗೆ ಪಡೆದಿದ್ದರು. ಇಂದು ಆ ಕಸ್ಟಡಿ ಅವಧಿ ಅಂತ್ಯವಾಗಲಿದ್ದು, ರೇವಣ್ಣರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ.
ಉಡುಪಿ: ಮಲ್ಪೆ ಬೀಚ್ ನಲ್ಲಿ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರ ರಕ್ಷಣೆ – Vishwanews24
