ಹೊಸದಿಲ್ಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವಕ್ಕೆ  ದ. ಕ.ದಿಂದ ವಿದ್ಯಾರ್ಥಿನಿ, ಶಿಕ್ಷಕಿ, ಗ್ರಾ.ಪಂ. ಅಧ್ಯಕ್ಷೆಗೆ ಆಹ್ವಾನ – vishwanews24

Featured, ದಕ್ಷಿಣ ಕನ್ನಡ

ಹೊಸದಿಲ್ಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವಕ್ಕೆ  ದ. ಕ.ದಿಂದ ವಿದ್ಯಾರ್ಥಿನಿ, ಶಿಕ್ಷಕಿ, ಗ್ರಾ.ಪಂ. ಅಧ್ಯಕ್ಷೆಗೆ ಆಹ್ವಾನ

ಮಂಗಳೂರು: ಆಗಸ್ಟ್ 15 ರಂದು ನವದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ‍್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕದ ನಾಲ್ಕು ಪಿಎಂಶ್ರೀ ಶಾಲೆಗಳ ನಾಲ್ವರು ವಿದ್ಯಾರ್ಥಿಗಳು ಮತ್ತು ನಾಲ್ವರು ಶಿಕ್ಷಕರನ್ನು ಆಹ್ವಾನಿಸಲಾಗಿದೆ. ಈ ಪೈಕಿ ಒಬ್ಬ ವಿದ್ಯಾರ್ಥಿ ಮತ್ತು ಒಬ್ಬ ಶಿಕ್ಷಕಿ ದಕ್ಷಿಣ ಕನ್ನಡದವರಾಗಿದ್ದಾರೆ.

ವಿಶೇಷ ಆಹ್ವಾನಿತರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಶಕ್ತಿನಗರ ನಾಲ್ಯಪದವು ಕುವೆಂಪು ಕೇಂದ್ರೀಯ ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಪೂರ್ವಿ ಯು. ಶೆಟ್ಟಿ ಹಾಗೂ ಅದೇ ಶಾಲೆಯ ಶಿಕ್ಷಕಿ ಶ್ವೇತಾ ಕೆ ಅವರಿಗೆ ಆಮಂತ್ರಣ ದೊರಕಿದೆ.

ಮಂಗಳೂರು: ಒರಿಯರ್ದೊರಿ ಅಸಲ್ ಖ್ಯಾತಿಯ ತುಳು ರಂಗನಟ ಅಶೋಕ್ ಶೆಟ್ಟಿ ನಿಧನ – vishwanews24

ಅದೇ ರೀತಿ, ಕರ್ನಾಟಕದ ಪಂಚಾಯತ್‌ಗಳ ಆರು ಮಹಿಳಾ ಅಧ್ಯಕ್ಷರನ್ನು ಸ್ವಾತಂತ್ರ‍್ಯ ದಿನಾಚರಣೆಗೆ ಆಹ್ವಾನಿಸಲಾಗಿದೆ. ಅವರಲ್ಲಿ ಒಬ್ಬರು ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೆಫೀಸಾ.

ಪೂರ್ವಿ ಯು. ಅವರು ಶಕ್ತಿನಗರದ ಕಾರ್ಮಿಕ ಕಾಲೋನಿಯಲ್ಲಿ ವಾಸವಿದ್ದು, ಉಮೇಶ್ ಶೆಟ್ಟಿ ಮತ್ತು ಗೀತಾ ಶೆಟ್ಟಿ ದಂಪತಿಯ ಪುತ್ರಿ. ಪಠ್ಯಕ್ರಮ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಪ್ರತಿಭಾನ್ವಿತೆಯಾಗಿರುವ ಈಕೆಯನ್ನು ಆಯ್ಕೆ ಮಾಡಲಾಗಿದೆ.

ಬಾಂಗ್ಲಾದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ವಿರೋಧಿಸಿ ಉಡುಪಿಯಲ್ಲಿ ಮಾನವ ಸರಪಳಿ ಮೂಲಕ ಪ್ರತಿಭಟನೆ – vishwanews24

ಕಲಬುರಗಿ, ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ಶಿಕ್ಷಣ ವಿಭಾಗದಿಂದ ಒಟ್ಟು ಎಂಟು ಮಂದಿ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ.

Leave a Reply